ಇವರಿಗೆ ಕಂಚುಕಿಯ ಯಜಮಾ ನನು ಹೆಸರುಗಳನ್ನಿಟ್ಟನು, ಹೇಗಂದರೆ ದಾನಿಯೇಲ ನನ್ನು ಬೇಲ್ತೆಶಚ್ಚರನೆಂದೂ ಹನನ್ಯನನ್ನು ಶದ್ರಕ್ನೆಂದೂ ವಿಾಶಾಯೇಲನನ್ನು ಮೇಶಕ್ನೆಂದೂ ಅಜರ್ಯನಿಗೆ ಅಬೆದ್ನೆಗೋ ಎಂದು ಕರೆದನು.
Cross references
ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.
ಫರೋಹನೆಕೋ ಯೋಷೀಯನ ಮಗ ನಾದ ಎಲ್ಯಾಕೀಮನನ್ನು ಅವನ ತಂದೆಯಾದ ಯೋಷೀ ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಯೆಹೋಯಾಕೀಮನೆಂಬ ಬದಲು ಹೆಸರನ್ನಿಟ್ಟು ಯೆಹೋವಾಹಾಜನನ್ನು ತೆಗೆದುಕೊಂಡು ಹೋದನು; ಅವನು ಐಗುಪ್ತದಲ್ಲಿ ಸತ್ತನು.
ಬಾಬೆಲಿನ ಅರ ಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯ ನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಚಿದ್ಕೀಯ ಎಂಬ ಹೆಸರನ್ನಿಟ್ಟನು.
ಅರಸನು ತನ್ನ ಕಂಚುಕಿಯರ ಯಜಮಾನನಾದ ಅಶ್ವೆವಜನ ಸಂಗಡ ಮಾತನಾಡಿ ಅವನು ಇಸ್ರಾಯೇಲಿನ ಮಕ್ಕಳೊಳಗೆ ಕೆಲವರನ್ನು ಅರಸನ ಸಂತಾನದೊಳ ಗಿಂದಲೂ ಮತ್ತು ಪ್ರಧಾನರಲ್ಲಿಯೂ
ಕಂಚುಕಿಯ ಯಜಮಾ ನನು ಹೇಳಿದ್ದೇನಂದರೆ--ನಿಮ್ಮ ಅನ್ನಪಾನಾದಿಗಳನ್ನು ನೇಮಿಸಿದ ನನ್ನ ಒಡೆಯನಾದ ಅರಸನಿಗೆ ನಾನು ಭಯಪಡುತ್ತೇನೆ; ಅವನು ಯಾಕೆ ನಿಮ್ಮ ಮುಖಗಳನ್ನು ನಿಮ್ಮ ಸ್ಥಿತಿಯಲ್ಲಿಯೇ ಇರುವ ಯೌವನಸ್ಥರಿಗಿಂತ ಕಳೆಗುಂದಿದವುಗಳನ್ನಾಗಿ ನೋಡಬೇಕು? ಈ ಪ್ರಕಾರ ನೀವು ಅರಸನ ಹತ್ತಿರ ನನ್ನ ತಲೆಗೆ ಅಪಾಯವನ್ನು ಬರಮಾಡುತ್ತೀರಿ ಅಂದನು.
ಆಗ ಅರಸನು ಬೇಲ್ತೆಶಚ್ಚರ ನೆಂಬ ದಾನಿಯೇಲನನ್ನು ಕುರಿತು--ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ ಅಂದನು.
ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್ ಮೇಷಕ್ ಮತ್ತು ಅಬೇದ್ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.
ಈಗ ನೀನು ಬಾಬೆಲ್ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್ ಮೇಷಕ್ ಅಬೇದ್ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು.
ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.
ಕಡೆಯಲ್ಲಿ ನನ್ನ ದೇವರ ಹೆಸರಿನ ಹಾಗೆಯೂ ಬೇಲ್ತೆಶಚ್ಚರನೆಂಬ ಹೆಸರುಳ್ಳವನಾಗಿಯೂ ಪರಿಶುದ್ಧ ದೇವರ ಆತ್ಮವನ್ನು ಹೊಂದಿದವನಾಗಿಯೂ ಇರುವ ದಾನಿಯೇಲನು ನನ್ನ ಮುಂದೆ ಬಂದನು; ಅವನಿಗೆ ನಾನು ಕನಸನ್ನು ತಿಳಿಸಿ ಹೇಳಿದ್ದೇನಂದರೆ--
ಬೆಲ್ಶೆಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವದಕ್ಕೂ ಕಠಿಣವಾದ ಸಂಗತಿಗಳನ್ನು ತಿಳಿಸುವದಕ್ಕೂ ಮರ್ಮಗಳನ್ನು ಬಿಚ್ಚುವ ದಕ್ಕೂ ಉತ್ತಮ ಆತ್ಮವೂ ಜ್ಞಾನವೂ ವಿವೇಕವೂ ಸಿಕ್ಕಿ ದವು ಅಂದಳು. ಈಗ ಆ ದಾನಿಯೇಲನನ್ನು ಕರೆಯಿ ಸಿದರೆ ಅವನು ಈ ಬರಹದ ಅರ್ಥವನ್ನು ವಿವರಿಸುವನು ಅಂದಳು.
ಪಾರಸಿಯ ಅರಸನಾದ ಕೋರೇಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆ ಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. ಬಹಳ ಕಷ್ಟದ ಆ ಸಂಗತಿಯು ಸತ್ಯವಾಗಿದೆ. ಅವನು ಕಂಡ ದರ್ಶನವನ್ನು ಗ್ರಹಿಸಿ ಆ ಸಂಗತಿಯನ್ನು ಮಂದಟ್ಟು ಮಾಡಿಕೊಂಡನು.