ಆದರೆ ದಾನಿಯೇಲನು ತಾನು ಅರಸನ ಭೋಜನದ ಪಾಲಿನಿಂದಲಾದರೂ ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು; ಆದುದರಿಂದ ತಾನು ಅಶುದ್ಧ ವಾಗದ ಹಾಗೆ ಕಂಚುಕಿಯರ ಯಜಮಾನನ್ನು ಬೇಡಿ ಕೊಂಡನು.
Cross references
ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು.
ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ಅವರ ಬಂಡೆಯು ಎಲ್ಲಿ? ಅವರು ಎದ್ದು ನಿಮಗೆ ಸಹಾಯ ಮಾಡಲಿ; ನಿಮಗೋಸ್ಕರ ಕಾವಲಾಗಲಿ.
ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು.
ಆದದರಿಂದ ಇಗೋ, ನನ್ನ ದೇವರಾದ ಕರ್ತನ ಹೆಸರಿಗೆ ಮನೆಯನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಕರ್ತನು ನನ್ನ ತಂದೆಯಾದ ದಾವೀದನಿಗೆ--ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಇರಿಸುವ ನಿನ್ನ ಮಗನೇ ನನ್ನ ಹೆಸರಿಗೆ ಮನೆಯನ್ನು ಕಟ್ಟಿಸುವನು ಎಂದು ಹೇಳಿದ್ದಾನಲ್ಲವೇ.
ಬಾಳ್ಪೆಗೊ ಯೋರಿಗೆ ಕೂಡಿಕೊಂಡು ಸತ್ತವರಿಗೆ ಅರ್ಪಿಸಿದ ಬಲಿಗಳನ್ನು ತಿಂದು
ನಿನ್ನ ನೀತಿ ವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣ ಮಾಡಿದ್ದೇನೆ; ಅದನ್ನು ಈಡೇರಿಸುವೆನು.
ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.
ನನ್ನ ಹೃದಯವನ್ನು ಲಾಲಿಸದೆ ಮಾಡು; ಅವರ ಸವಿ ಊಟಗಳನ್ನು ನಾನು ಉಣ್ಣುವದಿಲ್ಲ.
ಕರ್ತನು ಹೇಳಿದ್ದೇನಂದರೆ -- ಹೀಗೆಯೇ ಇಸ್ರಾಯೇಲ್ಯರ ಮಕ್ಕಳು ತಮ್ಮ ಅಶುದ್ಧವಾದ ರೊಟ್ಟಿಯನ್ನು ಅನ್ಯ ಜನಾಂಗಗಳೊಳಗೆ ತಿನ್ನುವರು. ಆಗ ನಾನು ಅವರನ್ನು ಓಡಿಸಿ ಬಿಡುತ್ತೇನೆ.
ಅರಸನು ರಾಜ ಭೋಜನದಲ್ಲಿಯೂ ತಾನು ಕುಡಿಯುವ ದ್ರಾಕ್ಷಾರಸ ದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿ ಸಿದನು; ಹೀಗೆ ಅವರು ಮೂರು ವರುಷಗಳ ಕಾಲ ಪೋಷಿಸಲ್ಪಟ್ಟ ಮೇಲೆ ಅರಸನ ಮುಂದೆ ನಿಲ್ಲತಕ್ಕವರಾಗುವರು.
ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.
ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು.
ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.
ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಕನ್ನಿಕೆಯನ್ನು ಮದುವೆಮಾಡಿ ಕೊಡುವದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು.
ಆದರೆ ಆ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಗಳಿಗೆ ಸಮರ್ಪಣೆ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿರುವದರಿಂದ ಅಶುದ್ಧವಾಗಿದೆ.
ಶರೀರದ ಪ್ರಕಾರ ಇಸ್ರಾಯೇಲ್ಯರನ್ನು ನೋಡಿರಿ; ಯಜ್ಞ ಮಾಡಿದವು ಗಳನ್ನು ತಿನ್ನುವವರು ಯಜ್ಞವೇದಿಯೊಂದಿಗೆ ಪಾಲು ಗಾರರಾಗಿದ್ದಾರಲ್ಲವೇ?
ಆದರೆ ಒಬ್ಬನು ನಿಮಗೆ--ಇದು ವಿಗ್ರಹಕ್ಕೆ ಬಲಿಕೊಟ್ಟದ್ದು ಎಂದು ಹೇಳಿದರೆ ಈ ವಿಷಯವನ್ನು ತಿಳಿಸಿದವನ ನಿಮಿತ್ತ ವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ತಿನ್ನ ಬೇಡಿರಿ; ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ.