ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ;
Cross references
ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು.
ಇದೇ ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿರುವದು. ನಿಮಗೆ ನಿತ್ಯವಾದ ನಿಯಮ ವಿರುವಂತೆ ನಿಮ್ಮ ಪ್ರಾಣಗಳನ್ನು ಕುಂದಿಸಬೇಕು.
ಈ ಏಳನೇ ತಿಂಗಳಿನ ಹತ್ತನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಅದರಲ್ಲಿ ನಿಮ್ಮ ಪ್ರಾಣಗಳನ್ನು ವ್ಯಥೆಪಡಿಸಿ ಯಾವ ಕೆಲಸವನ್ನಾದರೂ ಮಾಡಬಾರದು.
ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು.
ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,
ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.
ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು.
ಅವನು ನನಗೆ ತಿಳಿಸಿ ನನ್ನೊಡನೆ ಮಾತಾಡಿ ಹೇಳಿದ್ದೇನಂದರೆ--ಓ ದಾನಿಯೇಲನೇ, ನಿನಗೆ ವಿವೇಕವನ್ನೂ ಬುದ್ಧಿಯನ್ನೂ ಕೊಡುವದಕ್ಕೆ ಈಗ ನಾನು ಬಂದಿದ್ದೇನೆ.
ಆ ದಿನಗಳಲ್ಲಿ ದಾನಿಯೇಲನೆಂಬ ನಾನು ಮೂರು ಪೂರ್ಣ ವಾರಗಳ ವರೆಗೂ ದುಃಖಪಡುತ್ತಿದ್ದೆನು.
ಆಗ ಆತನು ನನಗೆ ಹೇಳಿದ್ದೇನಂದರೆ--ಓ ದಾನಿ ಯೇಲನೇ, ಅತಿಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ನಾನು ಈಗ ನಿನ್ನ ಬಳಿಗೆ ಕಳುಹಿಸ ಲ್ಪಟ್ಟಿದ್ದೇನೆ. ಅವನು ಈ ಮಾತುಗಳನ್ನು ಹೇಳಿದ ಮೇಲೆ ನಾನು ನಡುಗುತ್ತಲೇ ನಿಂತೆನು.
ಹೇಳಿದ್ದೇ ನಂದರೆ--ಓ ಅತಿಪ್ರಿಯನಾದ ಮನುಷ್ಯನೇ, ಭಯಪಡ ಬೇಡ; ನಿನಗೆ ಸಮಾಧಾನವಾಗಲಿ; ಬಲವಾಗಿರು; ಹೌದು ಬಲವಾಗಿರು; ಯಾವಾಗ ಅವನು ನನ್ನ ಸಂಗಡ ಹೀಗೆ ಮಾತನಾಡಿದನೋ ನಾನು ನನ್ನ ಬಲವನ್ನು ಹೊಂದಿ--ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ ಎಂದು ಹೇಳಿದೆನು.
ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು.
ಆಗ ಯೇಸು ಅವರಿಗೆ-- ಭಯ ಪಡಬೇಡಿರಿ; ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವ ರೆಂದೂ ಹೋಗಿ ಅವರಿಗೆ ಹೇಳಿರಿ ಅಂದನು.
ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ;
ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ;
ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
ಆದರೆ ಆತನು ಅವರಿಗೆ--ಯಾಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಆಲೋಚನೆಗಳು ಹುಟ್ಟುವದು ಯಾಕೆ?
ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
ಅದಕ್ಕೆ ಕೊರ್ನೇಲ್ಯನು--ನಾನು ನಾಲ್ಕು ದಿನಗಳ ಹಿಂದೆ ಈ ಗಳಿಗೆಯವರೆಗೂ ಉಪವಾಸವಿದ್ದು ಒಂಭತ್ತನೆಯ ತಾಸಿನಲ್ಲಿ (ಮೂರು ಘಂಟೆಗೆ) ನನ್ನ ಮನೆಯಲ್ಲಿ ಪ್ರಾರ್ಥಿಸಿದಾಗ ಇಗೋ, ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತು ಕೊಂಡು--
ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು.
ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.