ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.
Cross references
ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ.
ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು.
ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು
ಅನಂತರ ಬಹಳ ಕೇಡುಗಳೂ ಇಕ್ಕಟ್ಟುಗಳೂ ಅವರಿಗೆ ಸಂಭವಿಸು ವಾಗ ಈ ಹಾಡು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿ ಉತ್ತರ ಕೊಡುವದು; ಯಾಕಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತುಹೋಗುವದಿಲ್ಲ; ನಾನು ಪ್ರಮಾಣಮಾಡಿದ ದೇಶದಲ್ಲಿ ಅವರನ್ನು ತರುವದಕ್ಕಿಂತ ಮುಂಚೆ ಅವರು ಈಹೊತ್ತು ಮಾಡುವ ಕಲ್ಪನೆಗಳನ್ನು ನಾನು ಬಲ್ಲೆನು.
ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.
ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,
ದರ್ಶನದಲ್ಲಿ ಹೇಳಿದ ಆ ಉದಯಾಸ್ತಮಾನ ಗಳ ವಿಷಯವು ಸತ್ಯವೇ; ಆದಕಾರಣ ಆ ದರ್ಶನವನ್ನು ನೀನು ಮುಚ್ಚಿಡು, ಅದು ಬಹಳ ದಿವಸಗಳ ವರೆಗೆ ಇರುವದು.ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
ಅವನು ನನಗೆ ತಿಳಿಸಿ ನನ್ನೊಡನೆ ಮಾತಾಡಿ ಹೇಳಿದ್ದೇನಂದರೆ--ಓ ದಾನಿಯೇಲನೇ, ನಿನಗೆ ವಿವೇಕವನ್ನೂ ಬುದ್ಧಿಯನ್ನೂ ಕೊಡುವದಕ್ಕೆ ಈಗ ನಾನು ಬಂದಿದ್ದೇನೆ.
ಪಾರಸಿಯ ಅರಸನಾದ ಕೋರೇಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆ ಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. ಬಹಳ ಕಷ್ಟದ ಆ ಸಂಗತಿಯು ಸತ್ಯವಾಗಿದೆ. ಅವನು ಕಂಡ ದರ್ಶನವನ್ನು ಗ್ರಹಿಸಿ ಆ ಸಂಗತಿಯನ್ನು ಮಂದಟ್ಟು ಮಾಡಿಕೊಂಡನು.
ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು.
ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು; ಈ ಮಾತುಗಳು ಅಂತ್ಯಕಾಲದ ವರೆಗೂ ಮುಚ್ಚಲ್ಪಟ್ಟು ಮುದ್ರೆ ಹಾಕಲ್ಪ ಟ್ಟಿವೆ.
ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
ಆದರೆ ಕಡೇ ದಿವಸಗಳಲ್ಲಿ ಅಪಾಯಕರ ವಾದ ಕಾಲಗಳು ಬರುವವೆಂಬದನ್ನು ಸಹ ತಿಳಿದುಕೋ.
ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.