ಅವನು ಹೇಳಿದ್ದೇನಂದರೆ--ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ? ಈಗ ನಾನು ಪಾರಸಿಯ ಪ್ರಭುವಿನ ಸಂಗಡ (ಕಾದಾಡಲು) ತಿರುಗಿ ಹೋಗುತ್ತೇನೆ; ನಾನು ಹೋದ ಮೇಲೆ ಇಗೋ, ಗ್ರೀಕ್ ಪ್ರಭುವು ಬರುವನು.ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.
Cross references
ಆದದರಿಂದ ಆ ದೇಶದ ಜನರು ಯೆಹೂದ ಜನರ ಕೈಗಳನ್ನು ಬಲಹೀನ ಮಾಡಿ ಕಟ್ಟು ವದರಲ್ಲಿ ಅವರನ್ನು ಕಳವಳಪಡಿಸಿದರು.
ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
ಇದಾದ ಮೇಲೆ ನಾನು ನೋಡಲಾಗಿ ಇಗೋ, ಚಿರತೆಯ ಹಾಗಿರುವ ಇನ್ನೊಂದು (ಮೃಗ); ಇದರ ಬೆನ್ನಿನ ಮೇಲೆ ಪಕ್ಷಿಯ ನಾಲ್ಕು ರೆಕ್ಕೆಗಳು ಇದ್ದವು; ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇದ್ದವು. ಇದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
ನಾನು ಆಲೋಚಿ ಸಲಾಗಿ ಇಗೋ, ಪಶ್ಚಿಮದಿಂದ ಒಂದು ಹೋತವು ನೆಲವನ್ನು ಸೋಕದಂತೆ ಭೂಮಂಡಲವನ್ನೆಲ್ಲಾ ದಾಟಿ ಕೊಂಡು ಬಂತು. ಆ ಹೋತದ ಕಣ್ಣುಗಳ ಮಧ್ಯೆ ಗಮನಿಸತಕ್ಕ ಒಂದು ಕೊಂಬು ಇತ್ತು.
ಆ ಒರಟು ಹೋತವು ಗ್ರೀಕ್ನ ಅರಸನು ಮತ್ತು ಕಣ್ಣುಗಳ ಮಧ್ಯೆ ಇದ್ದ ಆ ದೊಡ್ಡ ಕೊಂಬು ಮೊದಲನೆಯ ಅರಸನು.
ಆದರೆ ಪಾರಸಿಯ ರಾಜ್ಯದ ಪ್ರಭುವು ಇಪ್ಪತ್ತೊಂದು ದಿವಸಗಳು ನನಗೆ ಎದುರು ನಿಂತನು; ಆದರೆ ಇಗೋ,ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ವಿಾಕಾಯೇಲನು ನನ್ನ ಸಹಾ ಯಕ್ಕೆ ಬಂದನು; ನಾನು ಆ ಪಾರಸೀಯ ಅರಸರ ಬಳಿಯಲ್ಲಿ ಉಳಿದುಕೊಂಡು
ನಾನು ಈಗ ನಿನಗೆ ಸತ್ಯವನ್ನು ತಿಳಿಸುತ್ತೇನೆ; ಇಗೋ, ಪಾರಸಿಯರಲ್ಲಿ ಇನ್ನು ಮೂರು ಅರಸರು ನಿಲ್ಲುವರು; ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು; ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸು ವನು.
ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.