ನಾನು ಒಬ್ಬನೇ ಉಳಿದು ಈ ದೊಡ್ಡ ದರ್ಶನವನ್ನು ನೋಡಿದೆನು; ನನ್ನಲ್ಲಿ ತ್ರಾಣವು ಇರ ಲಿಲ್ಲ. ನನ್ನ ಸೌಂದರ್ಯವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು.
Cross references
ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.
ಅವನು ಪೆನೂವೇಲನ್ನು ದಾಟಿ ಹೋದಾಗ ಅವನಿಗೆ ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನಿಮಿತ್ತ ಕುಂಟಿಕೊಂಡು ನಡೆದನು.ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲ್ ಮಕ್ಕಳು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದ ವರೆಗೂ ತಿನ್ನುವದಿಲ್ಲ.
ಆಗ ಮೋಶೆಯು--ನಾನು ಹೋಗಿ ಆ ಪೊದೆಯು ಯಾಕೆ ಸುಡದೆ ಇರುವದೆಂಬ ಆಶ್ಚರ್ಯ ವನ್ನು ನೋಡುವೆನು ಅಂದನು.
ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
ಅದು ಟಗರಿನ ಹತ್ತಿರ ಬರುವದನ್ನು ನಾನು ನೋಡಿದೆನು. ಅದರ ಮೇಲಿನ ಕ್ರೋಧದಿಂದ ಅದನ್ನು ಹಾದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದರ ಮುಂದೆ ನಿಲ್ಲುವದಕ್ಕೆ ಟಗರಿಗೆ ಏನೂ ಶಕ್ತಿಯಿ ರಲಿಲ್ಲ, ಆದರೆ ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿಯಿತು. ಟಗರನ್ನು ಅದರ ಕೈಯಿಂದ ಬಿಡಿಸುವವನು ಯಾರೂ ಇರಲಿಲ್ಲ.
ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.
ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.
ಅವನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ; ಯಾಕಂ ದರೆ ಅವರು ಬಹಳವಾಗಿ ಹೆದರಿದ್ದರು.
ಇಗೋ, ಒಬ್ಬೊಬ್ಬನು ತನ್ನ ತನ್ನ ಸ್ಥಳಕ್ಕೆ ಚದರಿ ಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಗಳಿಗೆ ಬರುವದು. ಹೌದು, ಈಗಲೇ ಬಂದಿದೆ. ಆದಾಗ್ಯೂ ನಾನು ಒಂಟಿಗನಲ್ಲ; ತಂದೆಯು ನನ್ನ ಸಂಗಡ ಇದ್ದಾನೆ.ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.)
ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.
ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.