ನಾನು ಈಗ ನಿನಗೆ ಸತ್ಯವನ್ನು ತಿಳಿಸುತ್ತೇನೆ; ಇಗೋ, ಪಾರಸಿಯರಲ್ಲಿ ಇನ್ನು ಮೂರು ಅರಸರು ನಿಲ್ಲುವರು; ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು; ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸು ವನು.
Cross references
ಪಾರಸಿ ಯರ ಅರಸನಾದ ಕೋರೆಷನ ದಿನಗಳಲ್ಲೆಲ್ಲಾ ಪಾರ ಸಿಯರ ಅರಸನಾದ ದಾರ್ಯಾವೆಷನ ಆಳ್ವಿಕೆಯ ಪರ್ಯಂತರ ಅವರ ಯೋಚನೆಯನ್ನು ವ್ಯರ್ಥಮಾಡು ವದಕ್ಕೆ ಅವರಿಗೆ ವಿರೋಧವಾಗಿ ಯೋಚನಾಕರ್ತರನ್ನು ಕೂಲಿಗೆ ಇಟ್ಟು ಕೊಂಡರು.
ಆದರೆ ಅಹಷ್ವೇರೋಷನು ಆಳುವಾಗ ಅವನ ಆಳ್ವಿಕೆಯ ಪ್ರಾರಂಭದಲ್ಲಿ ಅವರು ಯೆಹೂದ ಮತ್ತು ಯೆರೂಸಲೇಮಿನ ನಿವಾಸಿಗಳಿಗೆ ವಿರೋಧವಾಗಿ ದೂರು ಕಾಗದ ಬರೆದರು.
ಆದರೆ ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ ಮಿತ್ರದಾತನೂ ಟಾಬೆಯೇಲನೂ ಮಿಕ್ಕಾದ ಅವರ ಜತೆಗಾರರೂ ಪಾರಸಿಯರ ಅರಸನಾದ ಆರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯರ ಭಾಷೆಯಲ್ಲಿ ಟೀಕಿಸಲ್ಪಟ್ಟು, ಅರಾಮ್ಯರ ಅಕ್ಷರದಲ್ಲಿ ಬರೆಯಲ್ಪಟ್ಟಿತ್ತು.
ಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು. ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು.
ಅಹಷ್ವೇರೋಷನ ದಿವಸಗಳಲ್ಲಿ ಆದದ್ದುಆ ಅಹಷ್ವೇರೋಷನು ಭಾರತ ಮೊದ ಲ್ಗೊಂಡು ಕೂಷಿನವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತ್ಯಗಳನ್ನು ಆಳಿದನು;
ಆದದರಿಂದ ಗರ್ವವು ಅವರಿಗೆ ಕಂಠಮಾಲೆಯಂತೆ ಅವರನ್ನು ಸುತ್ತಿದೆ, ಬಲಾತ್ಕಾರವು ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತದೆ.
ನೀನು ಸತ್ಯದ ಮಾತುಗಳನ್ನು ಉತ್ತರಿ ಸುವಂತೆಯೂ ಆಲೋಚನೆಗಳ ತಿಳುವಳಿಕೆಯಲ್ಲಿ ಶ್ರೇಷ್ಠವಾದ ಸಂಗತಿಗಳನ್ನು ನಿನಗೆ ಬರೆಯಲಿಲ್ಲವೋ?
ಇದಲ್ಲದೆ ಇಗೋ, ಇನ್ನೊಂದು ಎರಡ ನೆಯ ಮೃಗವು ಕರಡಿಯ ಹಾಗಿರುವಂಥದ್ದು. ಇದಕ್ಕೆ ಒಂದು ಪಕ್ಕದಲ್ಲಿ ಒಂದು ಹೆಗಲನ್ನು ಮೇಲಕ್ಕೆ ಎತ್ತಿ ಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳು ಇದ್ದವು. ಅದಕ್ಕೆ ಅವರು --ಎದ್ದೇಳು ಹೆಚ್ಚು ಮಾಂಸವನ್ನು ತಿನ್ನು ಎಂದು ಹೇಳಿ ದರು.
ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿರು ವದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವದಕ್ಕೂ ಸಾಧ್ಯವಾಗು ವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ ತನ್ನನ್ನು ಹೆಚ್ಚಿಸಿಕೊಂಡಿತು.
ದರ್ಶನದಲ್ಲಿ ಹೇಳಿದ ಆ ಉದಯಾಸ್ತಮಾನ ಗಳ ವಿಷಯವು ಸತ್ಯವೇ; ಆದಕಾರಣ ಆ ದರ್ಶನವನ್ನು ನೀನು ಮುಚ್ಚಿಡು, ಅದು ಬಹಳ ದಿವಸಗಳ ವರೆಗೆ ಇರುವದು.ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
ಪಾರಸಿಯ ಅರಸನಾದ ಕೋರೇಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆ ಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. ಬಹಳ ಕಷ್ಟದ ಆ ಸಂಗತಿಯು ಸತ್ಯವಾಗಿದೆ. ಅವನು ಕಂಡ ದರ್ಶನವನ್ನು ಗ್ರಹಿಸಿ ಆ ಸಂಗತಿಯನ್ನು ಮಂದಟ್ಟು ಮಾಡಿಕೊಂಡನು.
ಅವನು ಹೇಳಿದ್ದೇನಂದರೆ--ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ? ಈಗ ನಾನು ಪಾರಸಿಯ ಪ್ರಭುವಿನ ಸಂಗಡ (ಕಾದಾಡಲು) ತಿರುಗಿ ಹೋಗುತ್ತೇನೆ; ನಾನು ಹೋದ ಮೇಲೆ ಇಗೋ, ಗ್ರೀಕ್ ಪ್ರಭುವು ಬರುವನು.ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.
ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.
ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ದಂಡೆತ್ತಿ ಬರುವನು; ದಕ್ಷಿಣದ ಅರಸನೂ ಅಧಿಕ ಬಲವುಳ್ಳ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು. ಆದರೆ ನಿಲ್ಲಲಾರದೆ ಹೋಗುವನು. ಯಾಕಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು.
ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.
ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ.
ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು
ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.