ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದಾಗ್ಯೂ ಕತ್ತಿಯಿಂದಲೂ ಬೆಂಕಿಯಿಂದಲೂ ಸೆರೆ ಯಿಂದಲೂ ಕೊಳ್ಳೆಯಿಂದಲೂ ಅನೇಕ ದಿನಗಳು ಸಿಕ್ಕಿಬೀಳುವರು.
Cross references
ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.
ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;
ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು.
ಮತ್ತು ಆತನು ಅವರಿಗೆ--ನನ್ನ ಪಾತ್ರೆಯಲ್ಲಿ ನೀವು ಕುಡಿಯು ವದು ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವದು ನಿಜ; ಆದರೆ ನನ್ನ ಬಲಗಡೆಯಲ್ಲಾ ಗಲೀ ಎಡಗಡೆಯಲ್ಲಾಗಲೀ ಕೂತುಕೊಳ್ಳುವಂತೆ ಅನುಗ್ರಹಿಸುವದು ನನ್ನದಲ್ಲ; ಆದರೆ ನನ್ನ ತಂದೆಯಿಂದ ಯಾರಿಗೋಸ್ಕರ ಅದು ಸಿ
ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು.
ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.
ಯೋಹಾನನ ಸಹೋದರನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.
ಆ ಪಟ್ಟಣದವರಿಗೆ ಸುವಾರ್ತೆಯನ್ನು ಸಾರಿ ಅನೇಕರಿಗೆ ಬೋಧಿಸಿದ ಮೇಲೆ ಪುನಃ ಹಿಂತಿರುಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.
ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.
ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು.
ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ.
ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.
ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.
ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.
ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ
ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.
ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.
ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ