Home Bibles ದಾನಿಯೇಲ 11:33 · ಕನ್ನಡ ಬೈಬಲ್
ದಾನಿಯೇಲ 11:33 · ಕನ್ನಡ ಬೈಬಲ್

ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದಾಗ್ಯೂ ಕತ್ತಿಯಿಂದಲೂ ಬೆಂಕಿಯಿಂದಲೂ ಸೆರೆ ಯಿಂದಲೂ ಕೊಳ್ಳೆಯಿಂದಲೂ ಅನೇಕ ದಿನಗಳು ಸಿಕ್ಕಿಬೀಳುವರು.

Cross references

ಯೆಶಾಯ 32:3

ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.

ದಾನಿಯೇಲ 12:3

ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;

ದಾನಿಯೇಲ 12:10

ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು.

ಜೆಕರ್ಯ 8:20

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;

ಮಲಾಕಿ 2:7

ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.

ಮತ್ತಾಯ 10:21

ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.

ಮತ್ತಾಯ 13:11

ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.

ಮತ್ತಾಯ 13:51

ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು.

ಮತ್ತಾಯ 20:23

ಮತ್ತು ಆತನು ಅವರಿಗೆ--ನನ್ನ ಪಾತ್ರೆಯಲ್ಲಿ ನೀವು ಕುಡಿಯು ವದು ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವದು ನಿಜ; ಆದರೆ ನನ್ನ ಬಲಗಡೆಯಲ್ಲಾ ಗಲೀ ಎಡಗಡೆಯಲ್ಲಾಗಲೀ ಕೂತುಕೊಳ್ಳುವಂತೆ ಅನುಗ್ರಹಿಸುವದು ನನ್ನದಲ್ಲ; ಆದರೆ ನನ್ನ ತಂದೆಯಿಂದ ಯಾರಿಗೋಸ್ಕರ ಅದು ಸಿ

ಮತ್ತಾಯ 24:9

ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.

ಮತ್ತಾಯ 28:20

ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್‌.

ಲೂಕ 24:44

ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.

ಯೋಹಾನ 16:2

ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.

ಅಪೋಸ್ತಲರ ಕೃತ್ಯಗಳು 4:2

ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು.

ಅಪೋಸ್ತಲರ ಕೃತ್ಯಗಳು 11:26

ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.

ಅಪೋಸ್ತಲರ ಕೃತ್ಯಗಳು 12:2

ಯೋಹಾನನ ಸಹೋದರನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.

ಅಪೋಸ್ತಲರ ಕೃತ್ಯಗಳು 14:21

ಆ ಪಟ್ಟಣದವರಿಗೆ ಸುವಾರ್ತೆಯನ್ನು ಸಾರಿ ಅನೇಕರಿಗೆ ಬೋಧಿಸಿದ ಮೇಲೆ ಪುನಃ ಹಿಂತಿರುಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.

1 ಕೊರಿಂಥದವರಿಗೆ 4:9

ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.

2 ತಿಮೋಥೆಯ 1:12

ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.

2 ತಿಮೋಥೆಯ 2:24

ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು.

2 ತಿಮೋಥೆಯ 4:6

ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ.

ಹೆಬ್ರಿಯರಿಗೆ 11:34

ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.

ಹೆಬ್ರಿಯರಿಗೆ 11:36

ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.

ಪ್ರಕಟನೆ 1:9

ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್‌ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.

ಪ್ರಕಟನೆ 2:13

ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ

ಪ್ರಕಟನೆ 6:9

ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.

ಪ್ರಕಟನೆ 7:14

ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.

ಪ್ರಕಟನೆ 13:7

ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.

ಪ್ರಕಟನೆ 17:6

ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ

Interlinear

Choose Theme