ಅವನು ತಲೆ ಎತ್ತಿದ ಮೇಲೆ ಅವನ ರಾಜ್ಯವು ಮುರಿಯಲ್ಪಟ್ಟು ಆಕಾಶದ ನಾಲ್ಕು ದಿಕ್ಕುಗಳ ಕಡೆಗೆ ವಿಭಾಗಿಸಲ್ಪಡುವದು; ಅವನ ಸಂತತಿಗಾಗಿ ಅಲ್ಲ, ಅಥವಾ ಅವನು ಆಳಿದ ಅಧಿಕಾರದ ಹಾಗಲ್ಲ ಅವನ ರಾಜ್ಯವು ಕೀಳಲ್ಪಟ್ಟು ಅವರಿಗಲ್ಲ, ಮತ್ತೊಬ್ಬರಿಗೆ ಹಂಚಲ್ಪಡುವದು.
Cross references
ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು.
ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.
ಅದು ನನ್ನ ದೃಷ್ಟಿಗೆ ಕಷ್ಟವಾಗಿತ್ತು. ಅವರ ಅಂತ್ಯವನ್ನು ಗ್ರಹಿಸಿ ಕೊಂಡೆನು.
ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು.
ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.
ಕೇಳಿರಿ, ಕಿವಿಗೊಡಿರಿ, ಗರ್ವಪಡಬೇಡಿರಿ; ಕರ್ತನು ಮಾತನಾಡಿದ್ದಾನೆ.
ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.
ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
ಕುದುರೆಗಳನ್ನು ಕಟ್ಟಿರಿ; ರಾಹುತರೇ, ಎದ್ದು ಶಿರಸ್ತ್ರಾಣಗಳನ್ನಿಟ್ಟು ನಿಂತುಕೊಳ್ಳಿರಿ, ಈಟಿಗಳನ್ನು ಮೆರುಗು ಮಾಡಿರಿ, ಕವಚಗಳನ್ನು ತೊಟ್ಟು ಕೊಳ್ಳಿರಿ;
ದಾನಿಯೇಲನು ಮಾತನಾಡಿ--ಇಗೋ, ನಾನು ರಾತ್ರಿ ಕಂಡ ಕನಸಿನಲ್ಲಿ ಚತುರ್ದಿಕ್ಕಿನ ಗಾಳಿಗಳು ಮಹಾ ಸಾಗರದ ಮೇಲೆ ರಭಸವಾಗಿ ಬೀಸುತ್ತಿದ್ದವು.
ಇದಾದ ಮೇಲೆ ನಾನು ನೋಡಲಾಗಿ ಇಗೋ, ಚಿರತೆಯ ಹಾಗಿರುವ ಇನ್ನೊಂದು (ಮೃಗ); ಇದರ ಬೆನ್ನಿನ ಮೇಲೆ ಪಕ್ಷಿಯ ನಾಲ್ಕು ರೆಕ್ಕೆಗಳು ಇದ್ದವು; ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇದ್ದವು. ಇದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.
ಆದದರಿಂದ ಆ ಹೋತವು ಬಹಳವಾಗಿ ಹೆಚ್ಚಿಕೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು.
ಈಗ ಅದು ಮುರಿಯ ಲ್ಪಟ್ಟು, ಅದಕ್ಕೆ ಬದಲಾಗಿ ನಾಲ್ಕು ಕೊಂಬುಗಳು ಎದ್ದ ವಿಷಯವೇನಂದರೆ--ಆ ಜನಾಂಗದಿಂದ ನಾಲ್ಕು ರಾಜ್ಯ ಗಳು ಉದಯಿಸುವವು; ಆದರೆ ಅವನ (ಮೊದಲ ನೆಯ ಅರಸನ) ಅಧಿಕಾರದಲ್ಲಿ ಇರುವದಿಲ್ಲ;
ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.
ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.