ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
Cross references
ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು.
ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.
ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.
ನಾನು ಅವನಿಗೆ ವಿರುದ್ಧ ವಾಗಿ ವ್ಯಾಧಿಯಿಂದಲೂ ರಕ್ತದಿಂದಲೂ ವಾದಿಸು ತ್ತೇನೆ. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನನ್ನು ಆರನೆಯ ಭಾಗವನ್ನಾಗಿ ಮಾಡಿಬಿಡುವೆನು; ಉತ್ತರದ ಭಾಗಗಳಿಂದ ಬರುವಂತೆ ಮಾಡುವೆನು ಮತ್ತು ನಿನ್ನನ್ನು ಇಸ್ರಾಯೇಲ್ಯರ ಪರ್ವತಗಳ ಮೇಲೆ ತರುವೆನು;
ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು.
ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು.
ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು; ಯಾರೂ ಅವನ ಮುಂದೆ ನಿಲ್ಲಲಾರರು; ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದು ಅವನ ಕೈಯಿಂದ ನಾಶವಾಗುವದು.
ಇದಲ್ಲದೆ ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳು ಕೆಡವಲ್ಪಡುವವು; ಆದರೆ ಎದೋಮು, ಮೋವಾಬು ಅಮ್ಮೋನನ ಮಕ್ಕಳಲ್ಲಿ ಮುಖ್ಯಸ್ಥರು ಆತನ ಕೈಯಿಂದ ತಪ್ಪಿಸಿಕೊಳ್ಳುವರು.
ಆದರೆ ಉತ್ತರ ದಿಕ್ಕಿನ ಸೈನ್ಯವನ್ನು ನಿಮಗೆ ದೂರಮಾಡಿ ಅವನನ್ನು ಒಣ ಭೂಮಿಗೂ ಅರಣ್ಯಕ್ಕೂ ಅವನ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಅವನ ಹಿಂಭಾಗವನ್ನು ಪಶ್ಚಿಮ ಸಮು ದ್ರಕ್ಕೂ ಓಡಿಸಿ ಬಿಡುವೆನು; ಅವನ ದುರ್ವಾಸನೆಯು ಏರುವದು; ಅವನ ನಾತವು ಏರುವದು; ಅವನು ದೊಡ್ಡದಾದವುಗಳನ್ನು ಮಾಡಿದ್ದಾನೆ.
ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
ಆ ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು.
ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.
ಆಗ ಒಂದು ಬಿಳೀ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯ ಕುಮಾರನಂತಿದ್ದ ಒಬ್ಬಾತನು ಕೂತಿರುವುದನ್ನೂ ನಾನು ಕಂಡೆನು; ಆತನ ತಲೆಯ ಮೇಲೆ ಬಂಗಾರದ ಕಿರೀಟವಿತ್ತು; ಆತನ ಕೈಯಲ್ಲಿ ಹದವಾದ ಕುಡುಗೋಲು ಇತ್ತು.
ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು.
ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.
ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ದೇವರ ಬಳಿಯಿಂದ ಬೆಂಕಿಯು ಪರಲೋಕ ದೊಳಗಿಂದ ಇಳಿದು ಬಂದು ಅವರನ್ನು ನುಂಗಿಬಿಟ್ಟಿತು.