ಆ ಕಾಲದಲ್ಲಿ ನಿನ್ನ ಜನರ ಮಕ್ಕಳಿಗೋಸ್ಕರ ನಿಲ್ಲುವ ಮಹಾಪ್ರಧಾನನಾದ ವಿಾಕಾ ಯೇಲನು ಏಳುವನು; ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನ ವರೆಗೂ ಸಂಭವಿಸದಂತ ಸಂಕಟವು ಸಂಭವಿಸುವದು. ಆಗ ನಿನ್ನ ಜನರೊಳಗೆ ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಹೆಸರು ಬರೆಯಲ್ಪಟ್ಟಿದೆಯೋ ಅವರೆಲ್ಲರೂ ಬಿಡುಗಡೆಯಾಗು ವರು.
Cross references
ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು.
ನನ್ನ ಅಲೆದಾಡುವಿಕೆಗಳನ್ನು ನೀನು ಲೆಕ್ಕಿಸಿದ್ದೀ; ನನ್ನ ಕಣ್ಣೀರನ್ನು ನಿನ್ನ ಬುದ್ದಲಿಯಲ್ಲಿ ಹಾಕು; ಅದು ನಿನ್ನ ಪುಸ್ತಕದಲ್ಲಿ ಇಲ್ಲವೋ?
ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.
ಹೀಗಿರುವಲ್ಲಿ ಚೀಯೋನಿನಲ್ಲಿ ಬಿಡಲ್ಪಟ್ಟವರು, ಯೆರೂಸಲೇಮಿನಲ್ಲಿ ಉಳಿದವರು, ಹಾಗೂ ಯೆರೂ ಸಲೇಮಿನಲ್ಲಿ ವಾಸಿಸುವವರೊಳಗೆ ಬರೆದಿರುವ ಪ್ರತಿ ಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡು ವನು.
ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ.
ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.
ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ;
ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು.
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು.
ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.
ಆದರೆ ಪಾರಸಿಯ ರಾಜ್ಯದ ಪ್ರಭುವು ಇಪ್ಪತ್ತೊಂದು ದಿವಸಗಳು ನನಗೆ ಎದುರು ನಿಂತನು; ಆದರೆ ಇಗೋ,ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ವಿಾಕಾಯೇಲನು ನನ್ನ ಸಹಾ ಯಕ್ಕೆ ಬಂದನು; ನಾನು ಆ ಪಾರಸೀಯ ಅರಸರ ಬಳಿಯಲ್ಲಿ ಉಳಿದುಕೊಂಡು
ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.
ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.
ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವದು, ಅದು ಪರಿಶುದ್ಧ ವಾಗಿರುವದು; ಯಾಕೋಬಿನ ಮನೆತನದವರು ತಮ್ಮ ಸ್ವಾಸ್ತ್ಯಗಳನ್ನು ಸ್ವತಂತ್ರಿಸಿಕೊಳ್ಳುವರು.
ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು.
ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.
ಯಾಕಂದರೆ ಆ ದಿವಸಗಳಲ್ಲಿ ಸಂಕಟವಿರುವದು; ಅಂಥದ್ದು ದೇವರು ಸೃಷ್ಟಿಸಿದ ಸೃಷ್ಟಿ ಮೊದಲುಗೊಂಡು ಈ ಸಮಯದವರೆಗೂ ಆಗಲಿಲ್ಲ ಇಲ್ಲವೆ ಆಗುವದೂ ಇಲ್ಲ.
ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.
ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು.
ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ.
ಅವರನ್ನು ತಳ್ಳುವದರಿಂದ ಲೋಕವು ಸಮಾಧಾನವಾಗು ವದಾದರೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದು ಬಂದಂತಾಗುವದಿಲ್ಲವೇ.
ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.
ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು.
ನಿಜ ಜೊತೆಗಾರನೇ, ನೀನು ಆ ಸ್ತ್ರೀಯರಿಗೆ ಸಹಾಯಕ ನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸ ಪಟ್ಟವರು. ಅವರ ಹೆಸರುಗಳು ಜೀವಗ್ರಂಥದಲ್ಲಿ ಬರೆದವೆ.
ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.
ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
ಇದಲ್ಲದೆ ಪರಲೋಕದಲ್ಲಿ ಯುದ್ಧ ನಡೆಯಿತು. ವಿಾಕಾಯೇಲನೂ ಅವನ ದೂತರೂ ಘಟಸರ್ಪಕ್ಕೆ ವಿರೋಧವಾಗಿ ಯುದ್ಧಮಾಡಿದರು; ಘಟಸರ್ಪನೂ ಅವನ ದೂತರೂ ಯುದ್ದಮಾಡಿ ಸೋತು ಹೋದರು.
ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
ಏಳನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದಲ್ಲಿ ಹೊಯ್ಯಲು ಪರಲೋಕದಲ್ಲಿದ್ದ ಆಲಯದೊಳಗಿಂದಲೂ ಸಿಂಹಾಸನದಿಂದಲೂ ಮಹಾಶಬ್ದವು ಬಂದು--ಮುಗಿಯಿತು ಎಂದು ಹೇಳಿತು.
ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.