ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು.
Cross references
ಇದಲ್ಲದೆ ಯಜ್ಞವೇದಿಯ ಮೇಲೆ ನೀನು ಅರ್ಪಿಸ ಬೇಕಾದದ್ದು ಇದೇ; ಒಂದು ವರುಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಡದೆ ಅರ್ಪಿಸಬೇಕು.
ನಿನ್ನ ಸೇವಕರನ್ನು ಹತ್ತು ದಿವಸಗಳ ವರೆಗೂ ಪರೀಕ್ಷಿಸಿ ನೋಡು, ಅವರು ನಮಗೆ ಆಹಾರಕ್ಕೆ ಕಾಯಿಪಲ್ಯಗಳನ್ನು ಕುಡಿಯುವದಕ್ಕೆ ನೀರನ್ನು ಕೊಡಲಿ.
ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು;
ದರ್ಶನದಲ್ಲಿ ಹೇಳಿದ ಆ ಉದಯಾಸ್ತಮಾನ ಗಳ ವಿಷಯವು ಸತ್ಯವೇ; ಆದಕಾರಣ ಆ ದರ್ಶನವನ್ನು ನೀನು ಮುಚ್ಚಿಡು, ಅದು ಬಹಳ ದಿವಸಗಳ ವರೆಗೆ ಇರುವದು.ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯ ಯಜ್ಞವನ್ನು ನೀಗಿಸಿ, ಹಾಳು ಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವದು.
ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.
ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು.
ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.