ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
Cross references
ಮೋಶೆಯ ಮುಖವು ಪ್ರಕಾಶಿಸುವದನ್ನು ಇಸ್ರಾಯೇಲ್ ಮಕ್ಕಳು ನೋಡುತ್ತಿದ್ದರು. ಮೋಶೆಯು ದೇವರ ಸಂಗಡ ಮಾತ ನಾಡುವದಕ್ಕೆ ತಿರಿಗಿ ಹೋಗುವ ವರೆಗೆ ಅವನು ತನ್ನ ಮುಖದ ಮೇಲೆ ತಿರಿಗಿ ಮುಸುಕನ್ನು ಹಾಕಿ ಕೊಳ್ಳುತ್ತಿದ್ದನು.
ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲು ವವನು ಜ್ಞಾನಿಯಾಗಿದ್ದಾನೆ.ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
ಇದಲ್ಲದೆ ಪ್ರಸಂಗಿಯು ಜ್ಞಾನಿಯಾಗಿದ್ದು ಇನ್ನೂ ಜನಗಳಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಹೌದು, ಅವನು ಪರೀಕ್ಷಿಸಿ, ವಿಚಾರಿಸಿ ಅನೇಕ ಜ್ಞಾನೋ ಕ್ತಿಗಳನ್ನು ಕ್ರಮವಾಗಿ ಹೊಂದಿಸಿದನು.
ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದಾಗ್ಯೂ ಕತ್ತಿಯಿಂದಲೂ ಬೆಂಕಿಯಿಂದಲೂ ಸೆರೆ ಯಿಂದಲೂ ಕೊಳ್ಳೆಯಿಂದಲೂ ಅನೇಕ ದಿನಗಳು ಸಿಕ್ಕಿಬೀಳುವರು.
ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು;
ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ
ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?
ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು.
ಕೊಯ್ಯುವವನು ಕೂಲಿಯನ್ನು ಹೊಂದಿ ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳು ತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಾಗಿ ಸಂತೋಷಿಸುವರು.
ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.
ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.
ಇದಲ್ಲದೆ ಆಕಾಶದ ದೇಹಗಳು ಮತ್ತು ಭೂಮಂಡಲದ ದೇಹಗಳು ಇವೆ;ಆದರೆ ಆಕಾಶದ ಮಹಿಮೆ ಒಂದು ವಿಧ ಮತ್ತು ಭೂಮಂಡಲದ ಮಹಿಮೆ ಮತ್ತೊಂದು ವಿಧ.
ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
ಹೀಗೆ ನಾನು ಕೆಲಸ ಸಾಧಿಸಿದ್ದೂ ಪ್ರಯಾಸಪಟ್ಟದ್ದೂ ವ್ಯರ್ಥವಾಗಲಿಲ್ಲ ವೆಂದು ತಿಳಿದು ಕ್ರಿಸ್ತನ ದಿನದಲ್ಲಿ ಸಂತೋಷಪಡುವೆನು.
ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.
ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.
ಸಹೋದರರೇ, ನಿಮ್ಮಲ್ಲಿ ಯಾವನಾದರೂ ಸತ್ಯ ದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.
ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.
ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.