ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು.
Cross references
ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ನ್ಯಾಯ ಪ್ರಮಾಣವನ್ನು ಮುದ್ರಿಸು.
ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿ ದ ವಾಕ್ಯಗಳ ಪುಸ್ತಕದ ಹಾಗಾಯಿತು; ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು ಇದನ್ನು ಓದು ಎಂದು ಬೇಡಿದರೆ ಅವನು--ಮುದ್ರೆ ಹಾಕಿದೆಯಲ್ಲಾ, ಆಗುವದಿಲ್ಲ ಅನ್ನು ವನು;
ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.
ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.
ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.
ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿಬಿದ್ದೆನು; ಆದರೆ ಅವನು ನನಗೆ--ಓ ಮನುಷ್ಯ ಪುತ್ರನೇ, ಇದು ಮಂದಟ್ಟಾಗಿರಲಿ; ಅಂತ್ಯಕಾಲದಲ್ಲಿ ಈ ದರ್ಶನವು ನೆರವೇರುವದು ಅಂದನು.
ಅವನು ಹೇಳಿದ್ದೇನಂದರೆ--ಇಗೋ, ಕ್ರೋಧದ ಕಟ್ಟಕಡೆಯಲ್ಲಿ ಆಗುವದನ್ನು ನಿನಗೆ ತಿಳಿಸು ತ್ತೇನೆ. ನಿಯಮಿತ ಕಾಲದಲ್ಲಿ ಅದು ಅಂತ್ಯವಾಗುವದು.
ದರ್ಶನದಲ್ಲಿ ಹೇಳಿದ ಆ ಉದಯಾಸ್ತಮಾನ ಗಳ ವಿಷಯವು ಸತ್ಯವೇ; ಆದಕಾರಣ ಆ ದರ್ಶನವನ್ನು ನೀನು ಮುಚ್ಚಿಡು, ಅದು ಬಹಳ ದಿವಸಗಳ ವರೆಗೆ ಇರುವದು.ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
ಪಾರಸಿಯ ಅರಸನಾದ ಕೋರೇಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆ ಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. ಬಹಳ ಕಷ್ಟದ ಆ ಸಂಗತಿಯು ಸತ್ಯವಾಗಿದೆ. ಅವನು ಕಂಡ ದರ್ಶನವನ್ನು ಗ್ರಹಿಸಿ ಆ ಸಂಗತಿಯನ್ನು ಮಂದಟ್ಟು ಮಾಡಿಕೊಂಡನು.
ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದಾಗ್ಯೂ ಕತ್ತಿಯಿಂದಲೂ ಬೆಂಕಿಯಿಂದಲೂ ಸೆರೆ ಯಿಂದಲೂ ಕೊಳ್ಳೆಯಿಂದಲೂ ಅನೇಕ ದಿನಗಳು ಸಿಕ್ಕಿಬೀಳುವರು.
ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.
ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು; ಈ ಮಾತುಗಳು ಅಂತ್ಯಕಾಲದ ವರೆಗೂ ಮುಚ್ಚಲ್ಪಟ್ಟು ಮುದ್ರೆ ಹಾಕಲ್ಪ ಟ್ಟಿವೆ.
ಆದರೆ ನೀನು ಅಂತ್ಯದ ವರೆಗೂ ಹೋಗು; ಯಾಕಂದರೆ ನೀನು ವಿಶ್ರಮಿಸಿಕೊಳ್ಳುವಿ ಮತ್ತು ದಿನಗಳ ಅಂತ್ಯದಲ್ಲಿ ನಿನ್ನ ಭಾಗದಲ್ಲಿ ನಿಲ್ಲುವಿ (ಎಂದು ಹೇಳಿದನು.)
ಆ ದಿನದಲ್ಲಿ ಆಗುವದೇ ನಂದರೆ--ಬೆಳಕು ಇಲ್ಲವೆ ಕತ್ತಲೆಯು ಸ್ಪಷ್ಟವಾಗಿರದು.
ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು.
ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
ಆ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟಾಗ ನಾನು ಬರೆಯ ಬೇಕೆಂದಿದ್ದೆನು. ಅದಕ್ಕೆ--ಆ ಏಳು ಗುಡುಗುಗಳು ನುಡಿದವುಗಳನ್ನು ನೀನು ಬರೆಯದೆ ಮುದ್ರಿಸು ಎಂದು ಪರಲೋಕದಿಂದ ಬಂದ ಶಬ್ದವು ನನಗೆ ಹೇಳುವದನ್ನು ಕೇಳಿದೆನು.
ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು.
ಇದಲ್ಲದೆ ಅವನು ನನಗೆ--ಈ ಪುಸ್ತಕದಲ್ಲಿರುವ ಪ್ರವಾದನೆಯ ಹೇಳಿಕೆಗಳಿಗೆ ಮುದ್ರೆಹಾಕಬೇಡ; ಯಾಕಂದರೆ ಸಮಯವು ಸವಿಾಪವಾಗಿದೆ.