ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.
Cross references
ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕ ದಿಂದಲೂ ಎಲ್ಲಾ ತರವಾದ ಕೆಲಸದ ಕಲೆಯಿಂದಲೂ ತುಂಬಿಸಿದ್ದೇನೆ.
ನಾನು ಇಗೋ, ನಾನೇ ಅವನೊಂದಿಗೆ ದಾನ್ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ.
ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ.
ಇದಲ್ಲದೆ ನಿನ್ನ ಸೇವಕನು ನೀನು ಆದುಕೊಂಡ ನಿನ್ನ ಮಹಾಜನರ ಮಧ್ಯದಲ್ಲಿ ಇದ್ದಾನೆ. ಆ ಜನರು ಬಹಳವಾಗಿರುವ ದರಿಂದ ಅವರನ್ನು ಎಣಿಸಲೂ ಲೆಕ್ಕ ಬರೆಯಲೂ ಆಗದು.
ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.
ಇದಲ್ಲದೆ ದೇವರು ಸೊಲೊ ಮೋನನಿಗೆ ಸಮುದ್ರ ತೀರದಲ್ಲಿರುವ ಮರಳಿನ ಹಾಗೆ ಅತ್ಯಧಿಕವಾಗಿ ಜ್ಞಾನ ವಿವೇಕಗಳನ್ನೂ ಮನೋವಿಶಾಲ ತೆಯನ್ನೂ ಕೊಟ್ಟನು.
ದೇವರು ಸೊಲೊಮೋನನ ಹೃದಯದಲ್ಲಿ ಉಂಟು ಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯಲ್ಲಿರುವ ಸಮಸ್ತರು ಅವನ ಬಳಿಗೆ ಬಂದರು.
ಆದರೆ ಕರ್ತನು ನಿನಗೆ ಬುದ್ಧಿಯನ್ನೂ ಗ್ರಹಿಕೆಯನ್ನೂ ಕೊಡಲಿ; ಇಸ್ರಾಯೇ ಲನ್ನು ಕುರಿತು ನಿನಗೆ ಆಜ್ಞಾಪಿಸಲಿ; ನಿನ್ನ ದೇವರಾದ ಕರ್ತನ ನ್ಯಾಯಪ್ರಮಾಣವನ್ನು ನೀನು ಕೈಕೊಳ್ಳುವ ಹಾಗೆ
ಇಗೋ, ದರ್ಶಿಯಾದ ಸಮುವೇಲನ ಪುಸ್ತಕ ದಲ್ಲಿಯೂ ಪ್ರವಾದಿಯಾದ ನಾತಾನನ ಪುಸ್ತಕ ದಲ್ಲಿಯೂ ದರ್ಶಿಯಾದ ಗಾದನ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.
ನಾನು ಈ ಜನರ ಮುಂದೆ ಹೊರಡುವ ಹಾಗೆಯೂ ಬರುವ ಹಾಗೆಯೂ ನನಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡು. ಈ ನಿನ್ನ ಮಹಾಜನಕ್ಕೆ ನ್ಯಾಯ ತೀರಿಸತಕ್ಕವನು ಯಾರು ಅಂದನು.
ಆಗ ನೀತಿ ನ್ಯಾಯಗಳನ್ನು ತಿಳಿದವರೆಲ್ಲರಿಗೂ ಅರಸನ ರೀತಿಯ ಪ್ರಕಾರವಾಗಿ ಅರಸನು ಕಾಲ ಜ್ಞಾನಿಗಳ ಸಂಗಡಲೂ
ಆತನು ಅರಸರ ಬಂಧನಗಳನ್ನು ಬಿಡಿಸಿ ಅವರ ನಡುಗಳಿಗೆ ನಡುಕಟ್ಟನ್ನು ಕಟ್ಟುತ್ತಾನೆ.
ಲೆಕ್ಕವಿಲ್ಲದ ಪರಾಕ್ರಮಿಗಳನ್ನು ಚೂರು ಚೂರು ಮಾಡಿ, ಮತ್ತೊಬ್ಬರನ್ನು ಅವರ ಸ್ಥಳದಲ್ಲಿ ನಿಲ್ಲಿಸು ತ್ತಾನೆ.
ಓ ಕರ್ತನೇ, ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನನ್ನ ದೇವರು ನೀನೇ ಎಂದು ಹೇಳಿದ್ದೇನೆ.
ನಿಮ್ಮ ಕೊಂಬನ್ನು ಉನ್ನತಕ್ಕೆ ಎತ್ತಬೇಡಿರಿ; ಬೊಗ್ಗದ ಕುತ್ತಿಗೆಯಿಂದ ಮಾತಾಡಬೇಡಿರಿ.
ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ,
ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
ನನ್ನ ಮೂಲಕ ರಾಜರು ಆಳುವರು. ಪ್ರಧಾನರು ತೀರ್ಪು ಕೊಡುವರು.
ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ; ಪ್ರತಿಯೊಂದು ಉದ್ದೇಶಕ್ಕೂ ಒಂದು ಸಮಯವಿದೆ.
ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--
ಆದರೆ ನೀವು ಕನಸ್ಸನ್ನು ನನಗೆ ತಿಳಿಸದೆ ಹೋದರೆ ನಿಮಗೆ ಒಂದೇ ನಿರ್ಣಯ ಉಂಟು; ಕಾಲ ಬದಲಾಗುವ ವರೆಗೂ ನೀವು ನನ್ನ ಮುಂದೆ ಕೆಟ್ಟ ಸುಳ್ಳು ಮಾತುಗಳನ್ನು ಮಾತನಾಡಲು ಸಿದ್ಧಮಾಡಿಕೊಂಡಿರುವಿರಿ; ಆದದರಿಂದ ಕನಸನ್ನು ನನಗೆ ತಿಳಿಸಿ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲಿ ರೆಂದು ನಾನು ತಿಳಿದುಕೊಂಡಿರುತ್ತೇನೆ ಎಂದು ಹೇಳಿ ದನು.
ಅವನು ಗಟ್ಟಿಯಾಗಿ ಕೂಗಿ--ಮರವನ್ನು ಕಡಿದು ಅದರ ಕೊಂಬೆಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ.
ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.
ಓ ಅರಸನೇ, ಆ ಮರವು ನೀನೇ ಆಗಿರುವಿ, ನೀನು ಬೆಳೆದು ಬಲವಾಗಿರುವಿ; ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ ನಿನ್ನ ಅಧಿಕಾರವು ಭೂಮಿಯ ಅಂತ್ಯದ ವರೆಗೂ ಮುಟ್ಟುವದು.
ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.
ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
ವರುಷಗಳ ಅಂತ್ಯದಲ್ಲಿ ಅವರು ಒಬ್ಬರಿಗೊಬ್ಬರು ಒಂದಾಗುವರು; ಹೇಗಂದರೆ ದಕ್ಷಿಣದ ಅರಸನ ಮಗಳು ಉತ್ತರದ ಅರಸನ ಬಳಿಗೆ ಬಂದು ಒಪ್ಪಂದ ಮಾಡಿಕೊಳ್ಳುವಳು; ಆದರೆ ಅವಳು ಭುಜ ಬಲವನ್ನು ಉಳಿಸಿಕೊಳ್ಳುವದಿಲ್ಲ; ಅವನೂ ಅವನ ತೋಳುಗಳೂ ನಿಲ್ಲುವದಿಲ್ಲ; ಅವಳೂ ಅವಳನ್ನು ಕರೆ ತಂದವರೂ ಅವಳನ್ನು ಪಡೆದವನೂ ಆ ಕಾಲದಲ್ಲಿ ಅವಳನ್ನು ಬಲಪಡಿಸಿದವನೂ ಉಳಿಯುವದಿಲ್ಲ.
ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ;
ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು.
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು.
ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.