ಅಗಾಧವಾದವುಗಳನ್ನು, ರಹಸ್ಯವಾದವು ಗಳನ್ನು ಪ್ರಕಟಮಾಡುತ್ತಾನೆ; ಕತ್ತಲೆಯಲ್ಲಿ ಇರುವಂತ ವುಗಳನ್ನು ತಿಳಿದಿರುವಂತವನಾಗಿದ್ದಾನೆ; ಬೆಳಕು ಆತ ನೊಳಗೆ ವಾಸಿಸುತ್ತದೆ.
Cross references
ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.
ಆಗ ಯೋಸೇಫನು ಫರೋಹನಿಗೆ--ಫರೋ ಹನ ಕನಸು ಒಂದೇ; ದೇವರು ಮಾಡುವದಕ್ಕಿರು ವದನ್ನು ಫರೋಹನಿಗೆ ತಿಳಿಸಿದ್ದಾನೆ.
ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
ಕತ್ತಲೆಯೊಳಗಿನಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾನೆ; ಮರಣದ ನೆರ ಳನ್ನು ಬೆಳಕಿಗೆ ತರುತ್ತಾನೆ.
ಆತನ ಮುಂದೆ ನರಕವು ಬೆತ್ತಲೆಯಾಗಿದೆ; ನಾಶನಕ್ಕೆ ಮರೆ ಇಲ್ಲ.
ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.
ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ.
ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು.
ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ.
ಜ್ಞಾನಿಯ ಹಾಗೆ ಇರುವವನು ಯಾರು? ಈ ಸಂಗತಿಯ ಅರ್ಥವನ್ನು ಬಲ್ಲವನು ಯಾರು? ಒಬ್ಬ ಮನುಷ್ಯನ ಜ್ಞಾನವು ಅವನ ಮುಖ ವನ್ನು ಬೆಳಗಿಸುತ್ತದೆ, ಅವನ ಧೈರ್ಯದ ಮುಖವು ಬದಲಾಗುವದು.
ಅವರು ಅವುಗಳನ್ನು ತಂದು ಮುಂದೆ ಏನಾಗುವದು ಎಂದು ನಮಗೆ ತೋರಿಸಲಿ; ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು ಅವುಗಳ ಪರಿಣಾಮವನ್ನು ಇಲ್ಲವೇ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು.
ಆತನು ನೀತಿವಂತನೆಂದು ನಾನು ತಿಳಿಯುವಂತೆ ಮತ್ತು ಹೇಳುವಂತೆ ಆದಿಯಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಹೌದು, ಯಾರೂ ತೋರಿಸು ವವನಿಲ್ಲ, ತಿಳಿಸುವವನು ಒಬ್ಬನೂ ಇಲ್ಲ. ನಿನ್ನ ಮಾತನ್ನೂ ಕೇಳುವವನು ಒಬ್ಬನೂ ಇಲ್ಲ.
ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ; ಅವು ಹುಟ್ಟುವದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ.
ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.
ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ.
ಅರಸನು ಕೇಳುವ ಸಂಗತಿಯು ಅಪರೂಪವಾದದ್ದು ಮತ್ತು ಮಾನವರ ಸಂಗಡ ವಾಸಮಾಡದ ದೇವರುಗಳೇ ಹೊರತು ಇನ್ಯಾರೂ ಅದನ್ನು ಅರಸನ ಮುಂದೆ ತಿಳಿಸಲಾರರು ಅಂದರು.
ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,
ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ; ದೇವ ರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಯೂ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ ಜ್ಯೋತಿಷ್ಯರಿಗೂ ಕಸ್ದೀಯರಿಗೂ ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.
ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ ಬೆಳಕೂ ಬುದ್ಧಿಯೂ ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.
ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ
ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ.
ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನೋಡುತ್ತಾನೆ.
ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.
ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ.
ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್.
ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
ನಾವು ಆತನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವದಂದರೆ--ದೇವರು ಬೆಳಕಾಗಿದ್ದಾನೆ; ಆತನಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ ಎಂಬದೇ.