ದಾನಿಯೇಲ 2:24 · ಕನ್ನಡ ಬೈಬಲ್
ಆದದರಿಂದ ದಾನಿಯೇಲನು ಬಾಬೆಲಿನ ಜ್ಞಾನಿ ಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ ಹೇಳಿದ್ದೇ ನಂದರೆ--ನೀನು ಬಾಬೆಲಿನ ಜ್ಞಾನಿಗಳನ್ನು ನಾಶಮಾಡ ಬೇಡ; ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು ಆಗ ನಾನು ಅರಸನಿಗೆ ಅರ್ಥವನ್ನು ತಿಳಿಸು ತ್ತೇನೆ ಅಂದನು.
Cross references
ದಾನಿಯೇಲ 2:12
ಇದರಿಂದ ಅರಸನು ಕೋಪವುಳ್ಳವನಾಗಿ ಮಹಾರೌದ್ರದಿಂದ ಬಾಬೆಲಿನಲ್ಲಿ ರುವ ಎಲ್ಲಾ ಜ್ಞಾನಿಗಳನ್ನು ನಾಶಮಾಡಬೇಕೆಂದು ಆಜ್ಞಾ ಪಿಸಿದನು.
ದಾನಿಯೇಲ 2:14
ಆ ಮೇಲೆ ಬಾಬೆಲಿನ ಜ್ಞಾನಿಗಳನ್ನು ಕೊಲ್ಲಲ್ಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಆಲೋಚನೆ ಯಿಂದಲೂ ಜ್ಞಾನದಿಂದಲೂ ಉತ್ತರಕೊಟ್ಟನು;
ಅಪೋಸ್ತಲರ ಕೃತ್ಯಗಳು 27:24
ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.