ಆಗ ದಾನಿ ಯೇಲನು ಅರಸನ ಸನ್ನಿಧಿಯಲ್ಲಿ ಪ್ರತ್ಯುತ್ತರವಾಗಿ--ಅರಸನು ನಿರ್ಭಂಧವಾಗಿ ಕೇಳುವ ರಹಸ್ಯವನ್ನು ಜ್ಞಾನಿಗಳೂ ಜೋತಿಷ್ಯರೂ ಮಂತ್ರಗಾರರೂ ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.
Cross references
ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ.
ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ
ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು.
ಆಗ ಅರಸನಿಗೆ ತನ್ನ ಕನಸುಗಳನ್ನು ತಿಳಿಸುವ ಹಾಗೆ ಅರಸನು ಮಂತ್ರಗಾರರನ್ನೂ ಜೋತಿಷ್ಯರನ್ನೂ ಮಾಟ ಗಾರರನ್ನೂ ಕಸ್ದೀಯರನ್ನೂ ಕರೆಯಲು ಆಜ್ಞಾಪಿಸಿ ದನು; ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.
ಆಗ ಕಸ್ದೀಯರು ಅರಸನಿಗೆ ಉತ್ತರವಾಗಿ--ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕ ದಲ್ಲಿಲ್ಲ; ಆದದರಿಂದ ಯಾವ ಅರಸನಾದರೂ ಯಾವ ಪ್ರಭುವಾದರೂ ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ ಜೋತಿಷ್ಯನಲ್ಲೂ ಕಸ್ದೀಯನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ.
ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು.
ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹ ವನ್ನು ಓದಲೂ ಅದರ ಅರ್ಥವನ್ನು ಅರಸನಿಗೆ ತಿಳಿ ಸಲೂ ಅವರಿಗೆ ಆಗದೆಹೋಯಿತು.