ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,
Cross references
ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.
ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ.
ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು.
ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು
ಹೀಗಿರುವದರಿಂದ ಈಗ ಈ ಹಾಡನ್ನು ಬರೆದು ಕೊಳ್ಳಿರಿ; ಇಸ್ರಾಯೇಲ್ ಮಕ್ಕಳಿಗೆ ಅದನ್ನು ಕಲಿಸು; ಇಸ್ರಾಯೇಲ್ ಮಕ್ಕಳಲ್ಲಿ ಈ ಹಾಡು ನನಗೆ ಸಾಕ್ಷಿಯಾ ಗಿರುವ ಹಾಗೆ ಅದನ್ನು ಅವರ ಬಾಯಿಗಳಲ್ಲಿ ಇಡು.
ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಇಚ್ಚಿಸುವ ದನ್ನೆಲ್ಲಾ ಮಾಡುತ್ತಾನೆ.
ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
ಅವರು ಅವುಗಳನ್ನು ತಂದು ಮುಂದೆ ಏನಾಗುವದು ಎಂದು ನಮಗೆ ತೋರಿಸಲಿ; ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು ಅವುಗಳ ಪರಿಣಾಮವನ್ನು ಇಲ್ಲವೇ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು.
ಯೆಹೂದದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಬೇಸಾಯ ಮಾಡುವವರೂ ಮಂದೆಯ ಸಂಗಡ ಹೊರಡುವವರೂ ವಾಸವಾಗು ವರು.
ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ.
ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.
ದಾನಿಯೇ ಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬೆಲಿನ ಜ್ಞಾನಿಗಳ ಸಂಗಡ ನಾಶವಾಗದೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.
ಅಗಾಧವಾದವುಗಳನ್ನು, ರಹಸ್ಯವಾದವು ಗಳನ್ನು ಪ್ರಕಟಮಾಡುತ್ತಾನೆ; ಕತ್ತಲೆಯಲ್ಲಿ ಇರುವಂತ ವುಗಳನ್ನು ತಿಳಿದಿರುವಂತವನಾಗಿದ್ದಾನೆ; ಬೆಳಕು ಆತ ನೊಳಗೆ ವಾಸಿಸುತ್ತದೆ.
ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.
ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.
ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.
ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
ಇಗೋ, ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ. ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು.
ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
ಆದರೆ ಕಡೇ ದಿವಸಗಳಲ್ಲಿ ಅಪಾಯಕರ ವಾದ ಕಾಲಗಳು ಬರುವವೆಂಬದನ್ನು ಸಹ ತಿಳಿದುಕೋ.
ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು
ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--