ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು.
Cross references
ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.
ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು.
ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ.
ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು.
ಹೌದು, ನೀನು ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲ್ಪಡುವಿ; ಕತ್ತಿಯಿಂದ ಹತರಾದವರ ಸಂಗಡ ಮಲಗುವಿ.
ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂತ ನದಿಯಾಗಿತ್ತು; ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು.
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.
ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು.
ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು.
ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.
ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು.
ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;