ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.
Cross references
ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ.
ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--
ಪ್ರವಾದಿಯಾದ ಯೆರೆವಿಾ ಯನು ಹೇಳಿದ್ದೇನಂದರೆ-- ಆಮೆನ್: ಕರ್ತನು ಹಾಗೆಯೇ ಮಾಡಲಿ: ನೀನು ಪ್ರವಾದಿಸಿದ ನಿನ್ನ ವಾಕ್ಯಗಳನ್ನು ಕರ್ತನು ನೆರವೇರಿಸಿ ಕರ್ತನ ಆಲಯದ ಪಾತ್ರೆಗಳನ್ನೂ ಸೆರೆಯವರೆಲ್ಲರನ್ನೂ ಬಾಬೆಲಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.
ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೆಲ್ತೆಶಚ್ಚರ ನೆಂಬ ನೀನು ಅದರ ಅರ್ಥವನ್ನು ಹೇಳು. ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿ ಶುದ್ಧ ದೇವರುಗಳ ಆತ್ಮವು ಇರುವದರಿಂದ ನೀನು ಹೇಳಲು ಸಾಧ್ಯವಾಯಿತು.
ಅದರ ಎಲೆಗಳು ಅಂದವಾಗಿದ್ದವು, ಫಲವು ಬಹಳವಾಗಿತ್ತು, ಅದರಲ್ಲಿ ಎಲ್ಲರಿಗೂ ಆಹಾರ ಇತ್ತು; ಅದರ ಕೆಳಗೆ ಬಯಲಿನ ಮೃಗಗಳು ವಾಸಮಾಡಿದ್ದವು; ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ನಿವಾಸಮಾಡಿದ್ದವು.
ಮೊದಲನೆಯದು ಸಿಂಹದ ಹಾಗಿದ್ದು ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ಅದರ ರೆಕ್ಕೆಗಳು ಕೀಳಲ್ಪಟ್ಟು ಅದು ಭೂಮಿಯಿಂದ ಎತ್ತಲ್ಪಟ್ಟು ಮನುಷ್ಯನಂತೆ ಕಾಲೂರಿ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲ್ಪಟ್ಟದ್ದನ್ನು ನಾನು ನೋಡಿದೆನು.