ಆಗ ಕಸ್ದೀಯರು ಅರಸನಿಗೆ ಅರಮಾಯ ಭಾಷೆಯಲ್ಲಿ ಹೇಳಿ ದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು, ಕನಸನ್ನು ನಿನ್ನ ಸೇವಕರಿಗೆ ಹೇಳು; ಆಗ ನಾವು ಅದರ ಅರ್ಥಗಳನ್ನು ತಿಳಿಸುವೆವು ಅಂದರು.
Cross references
ಆ ಕುಪ್ಪೆಗೆ ಲಾಬಾನನು ಯಗರಸಾಹದೂತ ಎಂದು ಹೆಸರಿಟ್ಟನು; ಯಾಕೋ ಬನು ಗಲೇದ್ ಎಂದೂ ಹೆಸರಿಟ್ಟನು;
ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು.
ಈ ಹೊತ್ತು ಅವನು ಇಳಿದು ಹೋಗಿ ಎತ್ತು ಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಅನೇಕ ವಾಗಿ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಸೈನ್ಯಾಧಿಪತಿ ಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಕರೆದಿ ದ್ದಾನೆ. ಇಗೋ, ಅವರು ಅವನ ಮುಂದೆ ತಿಂದು, ಕುಡಿದು--ಅರಸನಾದ ಅದೋನೀಯನನ್ನು ದೇವರು ರಕ್ಷಿಸಲಿ ಎಂದು ಅನ್ನುತ್ತಾರೆ.
ಆಗ ಬತ್ಷೆಬೆಳು ಮುಖವನ್ನು ನೆಲಕ್ಕೆ ಬೊಗ್ಗಿಸಿ ಅರಸನನ್ನು ವಂದಿಸಿ--ನನ್ನ ಒಡೆ ಯನೂ ಅರಸನೂ ಆದ ದಾವೀದನು ಎಂದೆಂದಿಗೂ ಬಾಳಲಿ ಅಂದಳು.
ಆದರೆ ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ ಮಿತ್ರದಾತನೂ ಟಾಬೆಯೇಲನೂ ಮಿಕ್ಕಾದ ಅವರ ಜತೆಗಾರರೂ ಪಾರಸಿಯರ ಅರಸನಾದ ಆರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯರ ಭಾಷೆಯಲ್ಲಿ ಟೀಕಿಸಲ್ಪಟ್ಟು, ಅರಾಮ್ಯರ ಅಕ್ಷರದಲ್ಲಿ ಬರೆಯಲ್ಪಟ್ಟಿತ್ತು.
ಆಗ ನಾನು ಬಹು ಭಯಪಟ್ಟು ಅರಸನಿಗೆ--ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿ ಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುವಾಗ ನನ್ನ ಮುಖವು ದುಃಖವಿಲ್ಲದೆ ಇರುವದು ಹೇಗೆ ಅಂದೆನು.
ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬವರು ರಬ್ಷಾಕೆಗೆ--ನೀನು ಮಾತನಾಡುವದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯ ವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಸಿರಿಯಾ ಭಾಷೆ ಯಲ್ಲಿ ಮಾತನಾಡು ಅದು ನಮಗೆ ತಿಳಿಯುತ್ತದೆ; ಯೆಹೂದ್ಯರ ಭಾಷೆಯಲ್ಲಿ ಮಾತನಾಡಬೇಡ ಎಂದು ಹೇಳಿದರು.
ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ
ಮಾತ ನಾಡಿ ಅರಸನಾದ ನೆಬೂಕದ್ನೆಚ್ಚರನಿಗೆ--ಓ ಅರಸನೇ, ನೀನು ನಿರಂತರವಾಗಿ ಬಾಳು.
ಆಗ ಮಂತ್ರಗಾರರು, ಜೋತಿಷ್ಯರು, ಕಸ್ದೀಯರು, ಶಕುನಗಾರರು ಒಳಗೆ ಬಂದರು; ನಾನು ಕನಸನ್ನು ಅವರಿಗೆ ತಿಳಿಸಿದೆನು; ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.
ಆಗ ಬೆಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ-- ಬೆಲ್ತೆಶಚ್ಚರನೇ, ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಕಳವಳಪಡಿಸದಿರಲಿ ಅಂದನು. ಆಗ ಬೆಲ್ತೆಶ ಚ್ಚರನು ಪ್ರತ್ಯುತ್ತರವಾಗಿ--ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.
ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹ ವನ್ನು ಓದಲೂ ಅದರ ಅರ್ಥವನ್ನು ಅರಸನಿಗೆ ತಿಳಿ ಸಲೂ ಅವರಿಗೆ ಆಗದೆಹೋಯಿತು.
ಆಗ ಅರಸನ ಮತ್ತು ಅವನ ಪ್ರಭುಗಳ ಮಾತುಗಳಿಗಾಗಿ ರಾಣಿಯು ಔತಣದ ಮನೆಗೆ ಬಂದು ಮಾತನಾಡಿ ಹೇಳಿದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು. ನಿನ್ನ ಆಲೋ ಚನೆಗಳು ನಿನ್ನನ್ನು ಕಳವಳಪಡಿಸದಿರಲಿ; ನಿನ್ನ ಮುಖವು ಕಳೆಗುಂದದಿರಲಿ;
ಆಗ ಪ್ರಧಾನರೂ ದೇಶಾಧಿಪತಿಯೂ ಅರಸನ ಬಳಿ ಕೂಡಿಬಂದು ಹೀಗೆಂದರು--ಅರಸನಾದ ದಾರ್ಯಾವೆಷನೇ, ನಿರಂತರವಾಗಿ ಬಾಳು.
ರಾಜ್ಯದ ಎಲ್ಲಾ ದೇಶಾಧಿಪತಿಗಳೂ ರಾಜ್ಯಪಾಲರೂ ನಾಯ ಕರೂ ಪ್ರಧಾನರೂ ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನಂದರೆ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾ ಪನೆ ಮಾಡಿದ್ದಾದರೆ ಅಂತವರು ಸಿಂಹದ ಗವಿಯಲ್ಲಿ ಹಾಕಲ್ಪಡುವರೆಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆ ಯನ್ನು ಕೊಡತಕ್ಕದ್ದು.
ಆಗ ದಾನಿಯೇಲನು ಅರಸನಿಗೆ--ಓ ಅರಸನೇ, ನೀನು ನಿರಂತರವಾಗಿ ಬಾಳು.
ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
ಆಗ ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗು ತ್ತಾ-- ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು;