ಅರಸನು ಕಸ್ದೀ ಯರಿಗೆ ಪ್ರತ್ಯುತ್ತರವಾಗಿ--ಆ ಕನಸಿನ ಸಂಗತಿಯು ನನ್ನನ್ನು ಬಿಟ್ಟು ಹೋಯಿತು; ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ ನೀವು ತುಂಡು ತುಂಡಾಗಿ ಕತ್ತರಿಸಲ್ಪಡುವಿರಿ; ನಿಮ್ಮ ಮನೆಗಳು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.
Cross references
ಇದಲ್ಲದೆ ಅದರ ಎಲ್ಲಾ ಕೊಳ್ಳೆಯನ್ನು ಅದರ ಬೀದಿಯ ಮಧ್ಯದಲ್ಲಿ ಕೂಡಿಸಿ ಆ ಪಟ್ಟಣವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ಸಂಪೂರ್ಣವಾಗಿ ನಿನ್ನ ದೇವರಾದ ಕರ್ತನಿಗೆ ಬೆಂಕಿಯಿಂದ ಸುಟ್ಟುಬಿಡಬೇಕು; ಅದು ಎಂದೆಂದಿಗೂ ದಿಬ್ಬವಾಗಬೇಕು; ತರುವಾಯ ಅದನ್ನು ಕಟ್ಟಬಾರದು.
ಆ ಕಾಲದಲ್ಲಿ ಯೆಹೋಶುವನು ಅವರಿಗೆ--ಈ ಯೆರಿಕೋ ಪಟ್ಟಣವನ್ನು ತಿರಿಗಿ ಕಟ್ಟಿಸುವ ಮನುಷ್ಯನು ಕರ್ತನ ಮುಂದೆ ಶಪಿಸಲ್ಪಡಲಿ; ತನ್ನ ಚೊಚ್ಚಲ ಮಗನಲ್ಲಿ ಅದರ ಅಸ್ತಿವಾರವನ್ನು ಹಾಕುವನು, ತನ್ನ ಕೊನೆಯ ಮಗನಲ್ಲಿ ಅದರ ಬಾಗಲುಗಳನ್ನು ಇಡುವನು ಎಂದು ಆಣೆ ಇಟ್ಟು ಹೇಳಿದನು.ಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು.
ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.
ಇದಲ್ಲದೆ ಅವರು ಬಾಳನ ವಿಗ್ರಹ ವನ್ನು ಒಡೆದುಹಾಕಿ ಬಾಳನ ಮನೆಯನ್ನು ಕೆಡವಿಬಿಟ್ಟು ಅದನ್ನು ಈ ಹೊತ್ತಿನ ವರೆಗೂ ತಿಪ್ಪೆಯಾಗಿ ಮಾಡಿದರು.
ನಾನು ಕೊಡುವ ಅಪ್ಪಣೆ ಏನಂದರೆ--ಯಾವನಾದರೂ ಈ ಮಾತನ್ನು ಬದಲು ಮಾಡಿದರೆ ಅವನ ಮನೆಯಿಂದ ಮರ ಕಿತ್ತು ನೆಡಲ್ಪಡಲಿ; ಅವನು ಅದರಲ್ಲಿ ಗಲ್ಲಿಗೆ ಹಾಕಲ್ಪಡಲಿ; ಅವನ ಮನೆಯು ಇದರ ನಿಮಿತ್ತ ತಿಪ್ಪೆ ಮಾಡಲ್ಪಡಲಿ.
ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
ಬಿಡದೆ ಹರಿಯುವ ನೀರಿನಂತೆ ಅವರು ಕರಗಿ ಹೋಗಲಿ; ಅವನು ತನ್ನ ಬಾಣಗಳನ್ನು ಗುರಿಯಿಟ್ಟಾಗ ಅವರು ಕಡಿಯಲ್ಪಟ್ಟ ತುಂಡುಗಳಂತಿರಲಿ.
ಇದರಿಂದ ಅರಸನು ಕೋಪವುಳ್ಳವನಾಗಿ ಮಹಾರೌದ್ರದಿಂದ ಬಾಬೆಲಿನಲ್ಲಿ ರುವ ಎಲ್ಲಾ ಜ್ಞಾನಿಗಳನ್ನು ನಾಶಮಾಡಬೇಕೆಂದು ಆಜ್ಞಾ ಪಿಸಿದನು.
ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ.ಆಗ ಅರಸನು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬ ವರನ್ನು ಬಾಬೆಲ್ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.