ಆದರೆ ನೀವು ಕನಸ್ಸನ್ನು ನನಗೆ ತಿಳಿಸದೆ ಹೋದರೆ ನಿಮಗೆ ಒಂದೇ ನಿರ್ಣಯ ಉಂಟು; ಕಾಲ ಬದಲಾಗುವ ವರೆಗೂ ನೀವು ನನ್ನ ಮುಂದೆ ಕೆಟ್ಟ ಸುಳ್ಳು ಮಾತುಗಳನ್ನು ಮಾತನಾಡಲು ಸಿದ್ಧಮಾಡಿಕೊಂಡಿರುವಿರಿ; ಆದದರಿಂದ ಕನಸನ್ನು ನನಗೆ ತಿಳಿಸಿ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲಿ ರೆಂದು ನಾನು ತಿಳಿದುಕೊಂಡಿರುತ್ತೇನೆ ಎಂದು ಹೇಳಿ ದನು.
Cross references
ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು.
ಕರಿಸಲ್ಪಡದೆ ಅರಸನ ಬಳಿಗೆ ಒಳಮನೆಯಲ್ಲಿ ಪ್ರವೇಶಿಸುವ ಯಾವನಾದರೂ ಗಂಡಸಾದರೂ ಸರಿ ಹೆಂಗಸಾದರೂ ಸರಿ ಬದುಕುವ ಹಾಗೆ ಅರಸನು ಬಂಗಾರದ ಮುದ್ರೆ ಕೋಲನ್ನು ಅವನ ಬಳಿಗೆ ಚಾಚಿ ದರೆ ಹೊರತು ಅವನನ್ನು ಕೊಲ್ಲಬೇಕೆಂಬ ಅವನ ಆಜ್ಞೆ ಒಂದೇ ಉಂಟೆಂದು ಅರಸನ ಸಮಸ್ತ ಸೇವ ಕರೂ ಅರಸನ ಪ್ರಾಂತ್ಯಗಳ ಜನರೂ ತಿಳಿದಿದ್ದಾರೆ. ಆದರೆ ನಾನು ಈ ಮೂವತ್ತು ದಿವಸಗಳಿಂದ ಅರಸನ ಬಳಿಗೆ ಕರೆಯಲ್ಪಡಲಿಲ್ಲ ಎಂದು ಅಂದಾಗ
ಸತ್ಯದ ತುಟಿಯು ಸದಾ ಸ್ಥಿರಗೊಳ್ಳು ವದು; ಸುಳ್ಳಾಡುವ ನಾಲಿಗೆಯು ಕ್ಷಣಿಕ.
ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ; ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದ ನ್ನಾಗಲಿ ಕೆಟ್ಟದ್ದನ್ನಾಗಲಿಮಾಡಿರಿ.
ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ
ಅವರು ವ್ಯರ್ಥವಾದದ್ದನ್ನೂ ಸುಳ್ಳು ಭವಿಷ್ಯ ವಾದದ್ದನ್ನೂ ನೋಡಿದ್ದಾರೆಂದು ಕರ್ತನು ಹೇಳುತ್ತಾನೆ; ಆದರೆ ಕರ್ತನು ಅವರನ್ನು ಕಳುಹಿಸಲಿಲ್ಲ; ತಾವು ನುಡಿದ ಮಾತು ಬೇರೆಯವರು ನಿರೀಕ್ಷಿಸುವಂತೆ ಮಾಡುತ್ತಾರೆ.
ಇದೇ ರೀತಿ ಮನುಷ್ಯಪುತ್ರನೇ, ತಮ್ಮ ಹೃದಯ ದೊಳಗಿಂದ ಪ್ರವಾದಿಸುವ ನಿನ್ನ ಜನರ ಕುಮಾರ್ತೆ ಯರಿಗೆ ವಿರೋಧವಾಗಿ ನಿನ್ನ ಮುಖವನ್ನು ಮಾಡಿ, ನೀನು ಅವರಿಗೆ ಪ್ರವಾದಿಸಿ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ--
ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಬಾರ್ಲಿಗೂ ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಪಡಿಸುವಿರೋ?
ಆಗ ದಾನಿಯೇಲನು ಒಳಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.
ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.
ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.
ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.