ಅರಸನಾದ ನೆಬೂಕದ್ನೆಚ್ಚರನು ಅರವತ್ತು ಮೊಳ ಎತ್ತರವಾಗಿಯೂ ಆರು ಮೊಳ ಅಗಲವಾಗಿಯೂ ಇರುವ ಒಂದು ಬಂಗಾರದ ಪ್ರತಿ ಮೆಯನ್ನು ಮಾಡಿಸಿ, ಬಾಬೆಲ್ ಪ್ರಾಂತ್ಯದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
Cross references
ನನ್ನ ಹೊರತಾಗಿ ಬೆಳ್ಳಿ ಬಂಗಾರದ ದೇವರುಗಳನ್ನೂ ನೀವು ಮಾಡಿಕೊಳ್ಳಬಾರದು.
ಅದಕ್ಕೆ ಆರೋನನು ಅವರಿಗೆ--ನಿಮ್ಮ ಹೆಂಡತಿಯರ ಮತ್ತು ನಿಮ್ಮ ಕುಮಾರ ಕುಮಾರ್ತೆಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಕಿತ್ತು ನನ್ನ ಬಳಿಗೆ ತನ್ನಿರಿ ಅಂದನು.
ಹೀಗೆ ಮೋಶೆಯು ಕರ್ತನ ಬಳಿಗೆ ತಿರಿಗಿ ಹೋಗಿ ಹೇಳಿದ್ದೇನಂದರೆ, ಅಯ್ಯೋ, ಈ ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ.
ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
ಆದರೆ ಆಭರಣಗಳೂ ಕಂಠಮಾಲೆ ಗಳೂ ಮಿದ್ಯಾನ್ಯರ ಅರಸುಗಳು ಹೊದ್ದುಕೊಂಡಿದ್ದ ರಕ್ತಾಂಬರ ವಸ್ತ್ರಗಳೂ ಅವರ ಒಂಟೆಗಳ ಕೊರಳಿಗೆ ಇದ್ದ ಸರಪಣಿಗಳೂ ಹೊರತು ಅವನು ಕೇಳಿ ತೆಗೆದು ಕೊಂಡ ಬಂಗಾರದ ವಾಲೆಗಳ ತೂಕವು ಸಾವಿರದ ಏಳು ನೂರು ಶೆಕೆಲ್ ತೂಕವಾಗಿತ್ತು.
ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
ಕರ್ತನೇ, ನಿಶ್ಚಯವಾಗಿ ಅಶ್ಶೂರಿನ ಅರಸುಗಳು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ ಅವರ ದೇವರುಗಳನ್ನು ಬೆಂಕಿಯಲ್ಲಿ ಹಾಕಿದ್ದಾರೆ.
ಅಹಷ್ವೇರೋಷನ ದಿವಸಗಳಲ್ಲಿ ಆದದ್ದುಆ ಅಹಷ್ವೇರೋಷನು ಭಾರತ ಮೊದ ಲ್ಗೊಂಡು ಕೂಷಿನವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತ್ಯಗಳನ್ನು ಆಳಿದನು;
ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ.
ಅನ್ಯಜನಾಂಗಗಳ ವಿಗ್ರಹಗಳು ಬೆಳ್ಳಿ ಬಂಗಾರ ದಿಂದ ಮಾಡಿದ ಮನುಷ್ಯನ ಕೈ ಕೆಲಸವಾಗಿವೆ.
ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.
ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನು ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಕ್ಕೆ ತೊಲಗಿಹೋಗಿರಿ ಎಂದು ಹೊಲೆಯ ಬಟ್ಟೆಯಂತೆ ಬಿಸಾಡಿಬಿಡುವಿರಿ.
ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ; ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ; ಬೆಳ್ಳಿಯ ಸರಪಣಿಗಳನ್ನು ಹಾಕುವನು.
ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು.
ಇದಲ್ಲದೆ, ಕರ್ತನು ನನಗೆ ಹೇಳಿದ್ದೇನಂದರೆ-- ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.
ಅವರಿಗೆ ಹೀಗೆ ಹೇಳು. ಏನಂದರೆ--ಯೆಹೂದದ, ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ.
ಓ ರಾಜನೇ, ನೀನು ನೋಡಲಾಗಿ, ಇಗೋ, ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನ ವಾದ ಈ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು; ಅದರ ಆಕಾರವು ಭಯಂಕರವಾಗಿತ್ತು.
ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು.ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್ ಮೇಷಕ್ ಮತ್ತು ಅಬೇದ್ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.
ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್ ಮೇಷಕ್ ಮತ್ತು ಅಬೇದ್ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.
ಆಗ ಅರಸನು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬ ವರನ್ನು ಬಾಬೆಲ್ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.
ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.
ಮರಕ್ಕೆ--ಎಚ್ಚರವಾಗು; ಮೂಕವಾದ ಕಲ್ಲಿಗೆ--ಎದ್ದು ಬೋಧಿಸಲಿ ಎಂದು ಹೇಳುವವನಿಗೆ ಅಯ್ಯೋ! ಇಗೋ, ಅದು ಬಂಗಾರದಿಂದಲೂ ಬೆಳ್ಳಿಯಿಂದಲೂ ಹೊದಿಸಲ್ಪಟ್ಟಿದೆ, ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.
ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.