ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
Cross references
ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು.
ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು.
ಹಾಗಾದರೆ ಕರ್ತನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟಾನೋ ಅಂದನು.
ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಈ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ.
ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ?
ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ?
ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳುವಾಗ ಅರಸನಾದ ನೆಬೂಕ ದ್ನೆಚ್ಚರನು ನಿಲ್ಲಿಸಿದ್ದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು.
ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.
ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್ ಮೇಷಕ್ ಅಬೇದ್ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.
ಆಗ ರಾಜನು ಆಜ್ಞಾಪಿಸಲು ಅವರು ದಾನಿಯೇಲ ನನ್ನು ತಂದು ಸಿಂಹದ ಗವಿಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ--ನೀನು ಯಾವಾಗಲೂ ಪ್ರಾರ್ಥಿ ಸುವ ನಿನ್ನ ದೇವರು ನಿನ್ನನ್ನು ಬಿಡಿಸುವನು ಎಂದು ಹೇಳಿದನು.
ಗವಿಯ ಹತ್ತಿರ ಬಂದಾಗ ದುಃಖದ ಧ್ವನಿಯಲ್ಲಿ ದಾನಿಯೇಲನ ಕಡೆಗೆ ಕೂಗಿದನು; ಅರಸನು ಮಾತನಾಡಿ ದಾನಿಯೇಲನಿಗೆ--ಜೀವವುಳ್ಳ ದೇವರ ಸೇವಕನಾದ ಓ ದಾನಿಯೇಲನೇ, ನೀನು ಯಾವಾ ಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಲು ಸಮರ್ಥನಾಗಿದ್ದಾನೆಯೇ? ಎಂದು ಕೇಳಿದನು.
ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು.
ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
ಆದರೆ ಅವರು ನಿಮ್ಮನ್ನು ಒಪ್ಪಿಸುವದಕ್ಕಾಗಿ ತಕ್ಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬದನ್ನು ಮುಂಚಿತವಾಗಿ ಚಿಂತಿಸಬೇಡಿರಿ, ಆಲೋಚಿಸಲೂ ಬೇಡಿರಿ; ಆದರೆ ಆ ಗಳಿಗೆಯಲ್ಲಿ ನಿಮಗೆ ಯಾವದು ಕೊಡಲ್ಪಡುವದೋ ಅದನ್ನೇ ಮಾತನಾಡಿರಿ; ಯಾಕಂ ದರೆ ಮಾತನಾಡುವವರು ನೀವಲ್ಲ, ಆದರೆ ಪರಿಶು
ಆದದರಿಂದ ನೀನು ನನ್ನನ್ನು ಆರಾಧಿಸಿದರೆ ಎಲ್ಲವುಗಳು ನಿನ್ನದಾಗುವವು ಎಂದು ಹೇಳಿದನು.
ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ.
ಇದು ಫಲ ಫಲಿಸಿದರೆ ಸರಿ; ಇಲ್ಲವಾದರೆ ನೀನು ಇದನ್ನು ಕಡಿದುಹಾಕಬಹುದು ಅಂದನು.
ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ.
ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ,
ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.
ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
ಆಗ ಅಧಿಪತಿಯು ಪೌಲನು ಮಾತನಾಡುವದಕ್ಕೆ ಕೈಸನ್ನೆ ಮಾಡಿದಾಗ ಅವನು--ಅನೇಕ ವರುಷಗಳಿಂದ ಈ ಜನಾಂಗಕ್ಕೆ ನೀನು ನ್ಯಾಯಾಧಿಪತಿಯಾಗಿ ರುವದು ನನಗೆ ತಿಳಿದಿರುವದರಿಂದ ನಾನು ಹೆಚ್ಚು ಧೈರ್ಯದಿಂದ ಪ್ರತಿವಾದ ಮಾಡುತ್ತೇನೆ;