ಆ ಮೇಲೆ ಅರಸನಾದ ನೆಬೂಕದ್ನೆಚ್ಚರನು ಪ್ರಭುಗಳನ್ನೂ ರಾಜ್ಯ ಪಾಲರನ್ನೂ ಆಲೋಚನಾಕರ್ತರು ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಬೊಕ್ಕಸದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿ ಷ್ಠೆಗೆ ಕರೆಯಿಸಿದನು.
Cross references
ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.
ಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು.
ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವದಕ್ಕೂ ಸಂತೋಷಪಡುವದಕ್ಕೂ ಕೂಡಿಬಂದರು. ಯಾಕಂದರೆ--ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು ಎಂದು ಅವರು ಹೇಳಿಕೊಂಡರು.
ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು.ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.
ಆಗ ಪ್ರಧಾನರು ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು ಎಲ್ಲರೂ ಒಟ್ಟುಗೂಡಿ ಇವರ ಶರೀರದ ಮೇಲೆ ಬೆಂಕಿಯ ಅಧಿಕಾರವು ಇಲ್ಲದಿ ರುವದನ್ನೂ ಅವರ ತಲೇಕೂದಲುಗಳಲ್ಲಿ ಒಂದಾದರೂ ಸುಡದಿರುವದನ್ನೂ ಅವರ ಅಂಗಿಗಳು ಬದಲಾಗದಿರು ವದನ್ನೂ ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವ ಆ ಮನುಷ್ಯರನ್ನು ಕಂಡರು.
ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗ ಗಳ ಮೇಲೆ ಅಧಿಕಾರಿಗಳನ್ನು ಇರಿಸಿದನು.
ಆಗ ಪ್ರಧಾನರೂ ದೇಶಾಧಿಪತಿಯೂ ಅರಸನ ಬಳಿ ಕೂಡಿಬಂದು ಹೀಗೆಂದರು--ಅರಸನಾದ ದಾರ್ಯಾವೆಷನೇ, ನಿರಂತರವಾಗಿ ಬಾಳು.
ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.