ಆಗ ಪ್ರಧಾನರು ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು ಎಲ್ಲರೂ ಒಟ್ಟುಗೂಡಿ ಇವರ ಶರೀರದ ಮೇಲೆ ಬೆಂಕಿಯ ಅಧಿಕಾರವು ಇಲ್ಲದಿ ರುವದನ್ನೂ ಅವರ ತಲೇಕೂದಲುಗಳಲ್ಲಿ ಒಂದಾದರೂ ಸುಡದಿರುವದನ್ನೂ ಅವರ ಅಂಗಿಗಳು ಬದಲಾಗದಿರು ವದನ್ನೂ ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವ ಆ ಮನುಷ್ಯರನ್ನು ಕಂಡರು.
Cross references
ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
ಅವನು ಹೋಗಿ ಇವನ ಹೆಣವು ದಾರಿಯಲ್ಲಿ ಹಾಕಲ್ಪಟ್ಟಿರು ವದನ್ನೂ ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತಿರುವದನ್ನೂ ನೋಡಿದನು.
ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.
ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
ಓ ಜನಾಂಗಗಳೇ, ಕರ್ತನಿಗೆ ನೀವು ಘನವನ್ನೂ ಬಲವನ್ನೂ ಸಲ್ಲಿಸಿರಿ.
ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
ಆ ಮೇಲೆ ಅರಸನಾದ ನೆಬೂಕದ್ನೆಚ್ಚರನು ಪ್ರಭುಗಳನ್ನೂ ರಾಜ್ಯ ಪಾಲರನ್ನೂ ಆಲೋಚನಾಕರ್ತರು ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಬೊಕ್ಕಸದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿ ಷ್ಠೆಗೆ ಕರೆಯಿಸಿದನು.
ಅವರು ತಮ್ಮ ಶಲ್ಯ, ಇಜಾರು, ಮುಂಡಾಸ ಮೊದಲಾದವುಗಳನ್ನು ಧರಿಸಿಕೊಂಡವರಾಗಿರುವಾಗ ಅವರು ಧಗಧಗನೆ ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಲ್ಪಟ್ಟರು.
ಆದರೆ ನಿಮ್ಮ ತಲೆಯ ಕೂದಲುಗಳೆಲ್ಲಾ ಲೆಕ್ಕಿಸಲ್ಪಟ್ಟಿವೆ.
ನನ್ನ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ಎಲ್ಲರೂ ದ್ವೇಷಿಸುವರು.
ಆಗ ಈ ಶಬ್ದವು ಬಹು ದೂರದವರೆಗೆ ಕೇಳಿಸಿದ್ದರಿಂದ ಜನಸಮೂಹವು ಕೂಡಿ ಬಂದು ಪ್ರತಿಯೊಬ್ಬನು ತನ್ನ ತನ್ನ ಸ್ವಭಾಷೆಯಲ್ಲಿ ಅವರು ಮಾತನಾಡಿದ್ದನ್ನು ಕೇಳಿ ಭ್ರಮೆಗೊಂಡರು.
ಯಾವ ರಾಜನ ಮುಂದೆ ನಾನು ಸರಳ ವಾಗಿ ಮಾತನಾಡುತ್ತಿರುವೆನೋ ಆ ರಾಜನು ಇವೆಲ್ಲವು ಗಳನ್ನು ತಿಳಿದವನಾಗಿದ್ದಾನೆ; ಈ ವಿಷಯಗಳಲ್ಲಿ ಯಾವವೂ ಅವನಿಗೆ ಮರೆಯಾಗಿಲ್ಲವೆಂದು ನನಗೆ ನಿಶ್ಚಯವಿದೆ; ಈ ವಿಷಯವು ಒಂದು ಮೂಲೆಯಲ್ಲಿ ನಡೆದದ್ದಲ್ಲ.
ನಿಮ್ಮ ಕ್ಷೇಮಕ್ಕಾಗಿ ಸ್ವಲ್ಪ ಆಹಾರವನ್ನು ತೆಗೆದುಕೊಳ್ಳಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮ್ಮಲ್ಲಿ ಯಾರ ತಲೆ ಯಿಂದ ಒಂದು ಕೂದಲೂ ಕೆಳಗೆ ಬಿದ್ದು ಹೋಗು ವದಿಲ್ಲ ಎಂದು ಹೇಳಿದನು.
ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.