ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ.ಆಗ ಅರಸನು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬ ವರನ್ನು ಬಾಬೆಲ್ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.
Cross references
ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.
ನಾನು ಕೊಡುವ ಅಪ್ಪಣೆ ಏನಂದರೆ--ಯಾವನಾದರೂ ಈ ಮಾತನ್ನು ಬದಲು ಮಾಡಿದರೆ ಅವನ ಮನೆಯಿಂದ ಮರ ಕಿತ್ತು ನೆಡಲ್ಪಡಲಿ; ಅವನು ಅದರಲ್ಲಿ ಗಲ್ಲಿಗೆ ಹಾಕಲ್ಪಡಲಿ; ಅವನ ಮನೆಯು ಇದರ ನಿಮಿತ್ತ ತಿಪ್ಪೆ ಮಾಡಲ್ಪಡಲಿ.
ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
ಅರಸನು ಕಸ್ದೀ ಯರಿಗೆ ಪ್ರತ್ಯುತ್ತರವಾಗಿ--ಆ ಕನಸಿನ ಸಂಗತಿಯು ನನ್ನನ್ನು ಬಿಟ್ಟು ಹೋಯಿತು; ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ ನೀವು ತುಂಡು ತುಂಡಾಗಿ ಕತ್ತರಿಸಲ್ಪಡುವಿರಿ; ನಿಮ್ಮ ಮನೆಗಳು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.
ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.
ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್ ಮೇಷಕ್ ಅಬೇದ್ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.
ನಾನು ಮಾಡುವ ತೀರ್ಮಾನವೇನಂದರೆ, ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯರು ದಾನಿಯೇಲನ ದೇವರಿಗೆ ಭಯಭಕ್ತಿ ಯಿಂದ ನಡೆದುಕೊಳ್ಳಬೇಕು. ಯಾಕಂದರೆ ಜೀವವುಳ್ಳ ದೇವರಾಗಿದ್ದು ಎಂದೆಂದಿಗೂ ಸ್ಥಿರವಾದವನು ಆತನೇ. ಆತನ ರಾಜ್ಯವು ನಾಶವಾಗದೆ ಆತನ ಆಳಿಕೆಯು ಶಾಶ್ವತವಾಗಿ ಕೊನೆಯವರೆಗೂ ನಿಲ್ಲುವದು.
ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸೀಯನಾದ ಕೋರೇಷನ ಆಳಿಕೆಯಲ್ಲಿಯೂ ಅಭಿವೃದ್ಧಿಯಾಗಿ ಬಾಳಿದನು.