Home Bibles ದಾನಿಯೇಲ 3:8 · ಕನ್ನಡ ಬೈಬಲ್
ದಾನಿಯೇಲ 3:8 · ಕನ್ನಡ ಬೈಬಲ್

ಹೀಗಿರಲು ಆ ಸಮಯದಲ್ಲಿ ಕಸ್ದೀಯರು ಯೆಹೂದ್ಯರ ಮೇಲೆ ದೂರು ಹೊರಿಸಲು ಸನ್ನಿಧಿಗೆ ಬಂದು

Cross references

ಎಜ್ರಾ 4:12

ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಆ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ.

ಎಸ್ತೇರ್ 3:6

ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು.

ಎಸ್ತೇರ್ 3:8

ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.

ದಾನಿಯೇಲ 2:10

ಆಗ ಕಸ್ದೀಯರು ಅರಸನಿಗೆ ಉತ್ತರವಾಗಿ--ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕ ದಲ್ಲಿಲ್ಲ; ಆದದರಿಂದ ಯಾವ ಅರಸನಾದರೂ ಯಾವ ಪ್ರಭುವಾದರೂ ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ ಜೋತಿಷ್ಯನಲ್ಲೂ ಕಸ್ದೀಯನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ.

ದಾನಿಯೇಲ 6:12

ಅನಂತರ ಅವರು ಹತ್ತಿರ ಬಂದು ಅರಸನ ಮುಂದೆ ರಾಜಾಜ್ಞೆಯ ವಿಷಯವಾಗಿ ಮಾತನಾಡಿ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳ ವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡು ವರೋ ಅವರು ಸಿಂಹದ ಗವಿಯಲ್ಲಿ ಹಾಕಲ್ಪಡುವ ರೆಂಬ ನಿರ್ಣಯಕ್ಕೆ ನೀನು ರುಜುಹಾಕಲಿಲ್ಲವೇ ಅಂದರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ--ಮೇದ್ಯ ಯರ ಪಾರಸೀಯರ ಬದಲಾಗದಂತ ನ್ಯಾಯ ಪ್ರಮಾಣದ ಪ್ರಕಾರ ಅದು ಸತ್ಯವೇ ಅಂದನು.

ದಾನಿಯೇಲ 6:13

ಆಗ ಅವರು ಪ್ರತ್ಯುತ್ತರವಾಗಿ ಅರಸನ ಮುಂದೆ--ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ ನೀನು ರುಜುಹಾಕಿದ ನಿರ್ಣಯವನ್ನಾದರೂ ಲಕ್ಷಿಸದೆ ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ ಅಂದರು.

ಅಪೋಸ್ತಲರ ಕೃತ್ಯಗಳು 16:20

ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ.

ಅಪೋಸ್ತಲರ ಕೃತ್ಯಗಳು 17:6

ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;

ಅಪೋಸ್ತಲರ ಕೃತ್ಯಗಳು 28:22

ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ; ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು.

1 ಪೇತ್ರ 4:3

ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.

Interlinear

Choose Theme