ಅದರ ಎಲೆಗಳು ಅಂದವಾಗಿದ್ದವು, ಅದರ ಫಲವು ಬಹಳವಾಗಿತ್ತು; ಅದರಲ್ಲಿ ಎಲ್ಲರಿಗೂ ಆಹಾರವಿತ್ತು; ಬಯಲು ಮೃಗಗಳಿಗೆ ಅದರ ಕೆಳಗೆ ನೆರಳಿತ್ತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು, ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ಇರುತ್ತಿತ್ತು.
Cross references
ಆತನು ಭೂಮಿಯ ಮುಖ್ಯಸ್ಥರ ವಿವೇಕವನ್ನು ತೆಗೆದು ಬಿಡುತ್ತಾನೆ. ಮಾರ್ಗವಿಲ್ಲದ ಕಾಡಿನಲ್ಲಿ ಅವರನ್ನು ಅಲೆಯ ಮಾಡುತ್ತಾನೆ.ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ.
ಮರಕ್ಕೆ ನಿರೀಕ್ಷೆಯುಂಟು; ಅದು ಕೊಯ್ಯಲ್ಪಟ್ಟರೆ ಮತ್ತೆ ಚಿಗುರುವದು. ಚಿಗುರುವದನ್ನು ನಿಲ್ಲಿಸುವದೇ ಇಲ್ಲ.
ನೀರಿನ ವಾಸನೆಯಿಂದ ಚಿಗುರಿ ಸಸಿಯ ಹಾಗೆ ಕೊಂಬೆ ಗಳನ್ನು ಬಿಡುವದು.
ಪ್ರವಾದಿಯಾದ ಯೆರೆವಿಾ ಯನು ಹೇಳಿದ್ದೇನಂದರೆ-- ಆಮೆನ್: ಕರ್ತನು ಹಾಗೆಯೇ ಮಾಡಲಿ: ನೀನು ಪ್ರವಾದಿಸಿದ ನಿನ್ನ ವಾಕ್ಯಗಳನ್ನು ಕರ್ತನು ನೆರವೇರಿಸಿ ಕರ್ತನ ಆಲಯದ ಪಾತ್ರೆಗಳನ್ನೂ ಸೆರೆಯವರೆಲ್ಲರನ್ನೂ ಬಾಬೆಲಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.
ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.
ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು.
ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.
ಆದರೆ ಆ ದಿನದ ಮತ್ತು ಆ ಗಳಿಗೆಯ ವಿಷಯ ವಾಗಿ ತಂದೆಗೇ ಹೊರತು ಯಾವ ಮನುಷ್ಯನಿಗೂ ಪರಲೋಕದಲ್ಲಿರುವ ದೂತರಿಗೂ ಮಗನಿಗೂ ತಿಳಿ ಯದು.
ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ; ಅದು ಬೆಳೆದು ಒಂದು ದೊಡ್ಡ ಮರವಾಯಿತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.