ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೆಲ್ತೆಶಚ್ಚರ ನೆಂಬ ನೀನು ಅದರ ಅರ್ಥವನ್ನು ಹೇಳು. ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿ ಶುದ್ಧ ದೇವರುಗಳ ಆತ್ಮವು ಇರುವದರಿಂದ ನೀನು ಹೇಳಲು ಸಾಧ್ಯವಾಯಿತು.
Cross references
ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು.
ಯಾರೊಬ್ಬಾಮನ ಪತ್ನಿ ಎಂದು ಯಾರೂ ತಿಳಿಯದ ಹಾಗೆ ವೇಷಹಾಕಿಕೊಂಡು ಶೀಲೋವಿಗೆ ಹೋಗು; ಇಗೋ--ಈ ಜನರ ಮೇಲೆ ನೀನು ಅರಸನಾಗಿರುವಿ ಎಂದು ನನಗೆ ಹೇಳಿದ ಪ್ರವಾದಿಯಾದ ಅಹೀಯನು ಅಲ್ಲಿದ್ದಾನೆ.
ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು.
ಅವರು ಮತ್ತೆ ಉತ್ತರವಾಗಿ--ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ, ಆಗ ಅದರ ಅರ್ಥವನ್ನು ನಾವು ತಿಳಿಸುವೆವು ಅಂದರು.
ಆಗ ಅರಸನು ಬೇಲ್ತೆಶಚ್ಚರ ನೆಂಬ ದಾನಿಯೇಲನನ್ನು ಕುರಿತು--ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ ಅಂದನು.
ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.
ಆಗ ಮಂತ್ರಗಾರರು, ಜೋತಿಷ್ಯರು, ಕಸ್ದೀಯರು, ಶಕುನಗಾರರು ಒಳಗೆ ಬಂದರು; ನಾನು ಕನಸನ್ನು ಅವರಿಗೆ ತಿಳಿಸಿದೆನು; ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.
ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹ ವನ್ನು ಓದಲೂ ಅದರ ಅರ್ಥವನ್ನು ಅರಸನಿಗೆ ತಿಳಿ ಸಲೂ ಅವರಿಗೆ ಆಗದೆಹೋಯಿತು.
ಈಗ ಈ ಬರಹವನ್ನು ಓದುವದಕ್ಕೂ ಅದರ ಅಭಿಪ್ರಾಯವನ್ನು ನನಗೆ ತಿಳಿಸು ವದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ತರಲ್ಪಟ್ಟಿದ್ದಾರೆ, ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.
ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.