ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂದು ಅವರು ಆಜ್ಞೆ ಮಾಡಿದ್ದರಲ್ಲಿ ಅಂದರೆ ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವದು.
Cross references
ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.
ಆದಾಗ್ಯೂ ಅದರ ಬೇರಿನ ಮೋಟನ್ನು ಕಬ್ಬಿಣ, ಹಿತ್ತಾಳೆಗಳ ಕಟ್ಟುಳ್ಳದ್ದ ನ್ನಾಗಿ ಮಾಡಿ ಭೂಮಿಯಲ್ಲಿಯೂ ಬಯಲಿನ ಎಳೆಯ ಹುಲ್ಲಿನಲ್ಲಿಯೂ ಬಿಡಿರಿ; ಅದು ಆಕಾಶದ ಮಂಜಿನಿಂದ ತೇವವಾಗಲಿ; ಅದರ ಪಾಲು ಮೃಗಗಳ ಸಂಗಡ ಭೂಮಿಯ ಹುಲ್ಲಿನಲ್ಲಿರಲಿ.
ಆಗ ಪಾಲಕನು ಮತ್ತು ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದು ಬಂದು--ಮರವನ್ನು ಕಡಿದು ನಾಶಮಾಡಿರಿ; ಆದರೆ ಅದರ ಬೇರಿನ ಮೋಟನ್ನು ಕಬ್ಬಿಣ ಮತ್ತು ಕಂಚುಗಳ ಕಟ್ಟುಳ್ಳದ್ದಾಗಿ ಭೂಮಿಯಲ್ಲಿಯೂ ಬಯಲಿನ ಎಳೇ ಹುಲ್ಲಿನಲ್ಲಿಯೂ ಬಿಡಿರಿ. ಅದು ಆಕಾಶದ ಮಂಜಿನಿಂದ ತೇವವಾಗಲಿ; ಏಳು ಕಾಲಗಳು ಕಳೆಯುವ ತನಕ ಅದರ ಪಾಲು ಕಾಡು ಮೃಗಗಳ ಸಹವಾಸದ ಗತಿಯಂತೆ ಬರಲಿ ಎಂದು ಸಾರುವದನ್ನು ಅರಸನಾದ ನೀನು ನೋಡಿದೆಯಲ್ಲಾ.
ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.
ಆದರೆ ನಾನು ನಿಮಗೆ ಹೇಳುವದೇನಂದರೆ--ಎಷ್ಟು ಮಾತ್ರಕ್ಕೂ ಅಣೆಯನ್ನು ಇಡಬೇಡ. ಪರಲೋಕದ ಮೇಲೆ ಬೇಡ; ಯಾಕಂದರೆ ಅದು ದೇವರ ಸಿಂಹಾಸನವು.
ಶಿಷ್ಯರು ಅದನ್ನು ನೋಡಿ ಆಶ್ಚರ್ಯ ದಿಂದ --ಎಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ ಎಂದು ಹೇಳಿದನು.
ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ;
ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು.