ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಶಬ್ದವು ಉಂಟಾಯಿತು; ಏನಂದರೆ--ಓ ಅರಸನಾದ ನೆಬೂಕದ್ನೆ ಚ್ಚರನೇ, ನಿನಗೆ ಹೇಳುವದೇನಂದರೆ, ನಿನ್ನ ರಾಜ್ಯವು ನಿನ್ನನ್ನು ಬಿಟ್ಟು ಹೋಯಿತು.
Cross references
ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.
ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.
ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.
ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು.
ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು.
ಓ ಅರಸನೇ, ಇದರ ಅರ್ಥವು ಏನಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ.
ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು.
ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.
ಆತನೇ ಉದ್ಧರಿಸುವವನೂ ರಕ್ಷಿಸುವವನೂ ಆಗಿದ್ದು ಪರ ಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ವಗಳನ್ನು ನಡೆಸುತ್ತಾನೆ; ದಾನಿಯೇಲನನ್ನು ಸಿಂಹ ಗಳ ಸಾಮರ್ಥ್ಯದಿಂದ ಬಿಡಿಸಿದಾತನು ಆತನೇ.ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸೀಯನಾದ ಕೋರೇಷನ ಆಳಿಕೆಯಲ್ಲಿಯೂ ಅಭಿವೃದ್ಧಿಯಾಗಿ ಬಾಳಿದನು.
ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು.
ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು.
ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಪರಲೋಕದೊಳ ಗಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು.
ಆಗ ಜನರು--ಇದು ಮನುಷ್ಯನ ಸ್ವರವಲ್ಲ , ದೇವರ ಸ್ವರವೇ ಎಂದು ಅರ್ಭಟಿಸಿದರು.
ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.