ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.
Cross references
ಅವನು ಮೋಶೆಗೆ--ನಾಳೆ ಅಂದನು. ಆಗ ಮೋಶೆಯು--ನಮ್ಮ ದೇವರಾಗಿರುವ ಕರ್ತನ ಹಾಗೆ ಯಾರು ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ನಿನ್ನ ಮಾತಿನ ಪ್ರಕಾರ ಆಗಲಿ.
ಭೂಲೋಕ ದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ಈ ಸಾರಿ ನಾನು ಎಲ್ಲಾ ಬಾಧೆಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡು ವೆನು.
ಆಗ ಮೋಶೆಯು ಅವನಿಗೆ--ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೆ ಕರ್ತನ ಕಡೆಗೆ ನನ್ನ ಕೈಗಳನ್ನು ಚಾಚುವೆನು; ಭೂಮಿಯು ಕರ್ತನದೇ ಎಂದು ನೀನು ತಿಳುಕೊಳ್ಳು ವಂತೆ ಗುಡುಗುಗಳು ನಿಂತುಹೋಗುವವು. ಆನೆಕಲ್ಲಿನ ಮಳೆಯು ಇನ್ನು ಬಾರದು.
ನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು.
ಇಗೋ, ಆತನು ತೆಗೆದುಕೊಂಡು ಹೋಗುತ್ತಾನೆ. ಆತನಿಗೆ ಅಡ್ಡಿಮಾಡುವವರು ಯಾರು? ಆತನನ್ನು--ನೀನು ಏನು ಮಾಡುತ್ತೀ ಎಂದು ಕೇಳುವ ವರಾರು?
ಆತನು ಅರಸರ ಬಂಧನಗಳನ್ನು ಬಿಡಿಸಿ ಅವರ ನಡುಗಳಿಗೆ ನಡುಕಟ್ಟನ್ನು ಕಟ್ಟುತ್ತಾನೆ.
ಜನರಿಂದ ಅವರನ್ನು ಹೊರಗೆ ಹಾಕುತ್ತಾರೆ; (ಕಳ್ಳರ ಹಿಂಡಿನಂತೆ ಅವರ ಹಿಂದೆ ಕೂಗುತ್ತಾರೆ).
ನಿನಗೆ ಎಲ್ಲಾ ಸಾಧ್ಯವಾಗಿದೆ; ನಿನಗೆ ಯಾವ ಆಲೋಚನೆಯೂ ತಡೆಯಲ್ಪಡುವದಿಲ್ಲವೆಂದು ತಿಳಿದಿದ್ದೇನೆ.
ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಇಚ್ಚಿಸುವ ದನ್ನೆಲ್ಲಾ ಮಾಡುತ್ತಾನೆ.
ಕರ್ತನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರದ ಲ್ಲಿಯೂ ಎಲ್ಲಾ ಅಗಾಧಗಳಲ್ಲಿಯೂ ತಾನು ಅಪೇಕ್ಷಿಸು ವದನ್ನೆಲ್ಲಾ ಮಾಡುತ್ತಾನೆ.
ನನ್ನ ಮೂಲಕ ರಾಜರು ಆಳುವರು. ಪ್ರಧಾನರು ತೀರ್ಪು ಕೊಡುವರು.
ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.
ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆ ಯಿಂದುದುರುವ ಹನಿಯಂತೆಯೂ ತಕ್ಕಡಿಯಲ್ಲಿನ ದೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಆತನು ಎತ್ತುತ್ತಾನೆ.
ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ; ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ ವ್ಯರ್ಥ ವಾಗಿಯೂ ಇವೆ.
ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು.
ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--
ಅವನು ಗಟ್ಟಿಯಾಗಿ ಕೂಗಿ--ಮರವನ್ನು ಕಡಿದು ಅದರ ಕೊಂಬೆಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ.
ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು.
ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.