ಆಗ ಮಂತ್ರಗಾರರು, ಜೋತಿಷ್ಯರು, ಕಸ್ದೀಯರು, ಶಕುನಗಾರರು ಒಳಗೆ ಬಂದರು; ನಾನು ಕನಸನ್ನು ಅವರಿಗೆ ತಿಳಿಸಿದೆನು; ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.
Cross references
ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
ಆ ಬಡಕಲಾದ ಏಳು ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಯಪಡಿಸಿದಾಗ ಅದರ ಅರ್ಥವನ್ನು ನನಗೆ ಹೇಳುವವರು ಯಾರೂ ಇರಲಿಲ್ಲ.
ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು.
ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ
ಸಮಾಧಾನ ವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ ಆ ಪ್ರವಾದಿಯ ವಾಕ್ಯವು ಉಂಟಾಗುವಾಗ ಅವನು ದೇವ ರಿಂದ ನಿಜವಾಗಿ ಕಳುಹಿಸಲ್ಪಟ್ಟ ಪ್ರವಾದಿ ಎಂದು ತಿಳಿಯತಕ್ಕದ್ದು ಅಂದನು.
ಇಗೋ, ಅಶ್ಶೂರ್ಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವ ದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಎತ್ತರವು ನೀಳವಾಗಿದೆ; ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.
ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರುಷದಲ್ಲಿ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು.
ಅವರು ಮತ್ತೆ ಉತ್ತರವಾಗಿ--ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ, ಆಗ ಅದರ ಅರ್ಥವನ್ನು ನಾವು ತಿಳಿಸುವೆವು ಅಂದರು.
ಆಗ ಕಸ್ದೀಯರು ಅರಸನಿಗೆ ಉತ್ತರವಾಗಿ--ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕ ದಲ್ಲಿಲ್ಲ; ಆದದರಿಂದ ಯಾವ ಅರಸನಾದರೂ ಯಾವ ಪ್ರಭುವಾದರೂ ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ ಜೋತಿಷ್ಯನಲ್ಲೂ ಕಸ್ದೀಯನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ.
ಆಗ ದಾನಿ ಯೇಲನು ಅರಸನ ಸನ್ನಿಧಿಯಲ್ಲಿ ಪ್ರತ್ಯುತ್ತರವಾಗಿ--ಅರಸನು ನಿರ್ಭಂಧವಾಗಿ ಕೇಳುವ ರಹಸ್ಯವನ್ನು ಜ್ಞಾನಿಗಳೂ ಜೋತಿಷ್ಯರೂ ಮಂತ್ರಗಾರರೂ ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.
ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ.