Home Bibles ದಾನಿಯೇಲ 4:9 · ಕನ್ನಡ ಬೈಬಲ್
ದಾನಿಯೇಲ 4:9 · ಕನ್ನಡ ಬೈಬಲ್

ಓ ಮಂತ್ರ ಗಾರರ ಯಜಮಾನನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರ ಆತ್ಮವಿರುವದೆಂದೂ ಯಾವ ರಹ ಸ್ಯವೂ ನಿನ್ನನ್ನು ಕಳವಳಪಡಿಸದೆಂದೂ ನಾನು ಬಲ್ಲೆನು; ನಾನು ಕಂಡ ಕನಸಿನ ದರ್ಶನವನ್ನೂ ಅದರ ಅರ್ಥ ವನ್ನೂ ನೀನು ನನಗೆ ಹೇಳು.

Cross references

ಆದಿಕಾಂಡ 11:6

ಕರ್ತನು--ಇಗೋ, ಜನವು ಒಂದೇ; ಅವರೆಲ್ಲರಿಗೆ ಭಾಷೆಯೂ ಒಂದೇ. ಈಗ ಅವರು ಇದನ್ನು ಮಾಡಲಾರಂಭಿಸಿದ್ದಾರೆ; ಇನ್ನು ಮುಂದೆ ಅವರು ಮಾಡುವದಕ್ಕೂ ಊಹಿಸುವದಕ್ಕೂ ಅಡ್ಡಿ ಯಾಗದು.

ಆದಿಕಾಂಡ 40:9

ಆಗ ಮುಖ್ಯ ಪಾನದಾಯಕನು ತನ್ನ ಕನಸನ್ನು ಯೋಸೇಫನಿಗೆ ತಿಳಿಸುವವನಾಗಿ ಅವನಿಗೆ--ನನ್ನ ಕನಸಿನಲ್ಲಿ ಇಗೋ, ನನ್ನ ಮುಂದೆ ಒಂದು ದ್ರಾಕ್ಷೇ ಬಳ್ಳಿಯಿತ್ತು.

ಆದಿಕಾಂಡ 41:15

ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು.

ಆದಿಕಾಂಡ 41:38

ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು.

ನ್ಯಾಯಾಧಿಪತಿಗಳು 7:13

ಗಿದ್ಯೋನನು ಬಂದಾಗ ಇಗೋ, ಒಬ್ಬನು ತನ್ನ ಜೊತೆಗಾರನಿಗೆ ತನಗಾದ ಸ್ವಪ್ನವನ್ನು ವಿವರಿಸಿ ಹೇಳಿದ್ದೇ ನಂದರೆ--ಇಗೋ, ನಾನು ಒಂದು ಕನಸನ್ನು ಕಂಡೆನು. ಇಗೋ, ಒಂದು ಜವೆಗೋಧಿಯ ರೊಟ್ಟಿಯು ಮಿದ್ಯಾ ನ್ಯರ ದಂಡಿನ ಮೇಲೆ ಹೊರಳಿ ಒಂದು ಡೇರೆಯಮೇಲೆ ಬಂದು ಅದು ಬೀಳುವ ಹಾಗೆ ಅದನ್ನು ಹೊಡೆದು ಕೆಡವಿಹಾಕಿತು; ಆಗ ಡೇರೆಯು ಬಿದ್ದುಹೋಯಿತು ಅಂದನು.

1 ಸಮುವೇಲ 4:8

ನಮಗೆ ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವನಾರು ಐಗುಪ್ತ್ಯರನ್ನು ಅರಣ್ಯದಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ.

ಯೆಶಾಯ 33:18

ಆಗ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ ಬರೆಯು ವವನು ಎಲ್ಲಿ? ಅಂಗೀಕರಿಸುವವನು ಎಲ್ಲಿ? ಬುರುಜು ಗಳನ್ನು (ಗೋಪುರಗಳನ್ನು) ಲೆಕ್ಕಮಾಡಿದವನು ಎಲ್ಲಿ ಎಂದು ಅಂದುಕೊಳ್ಳುವಿರಿ.

ಯೆಶಾಯ 54:14

ನೀನು ನೀತಿಯಲ್ಲಿ ನೆಲೆಗೊಂಡಿರುವಿ; ಹಿಂಸೆ ಯಿಂದ ದೂರವಾಗಿರುವಿ; ನೀನು ಭೀತಿಯಿಂದ ಭಯ ಪಡುವದಿಲ್ಲ; ಅದು ನಿನ್ನ ಸವಿಾಪಕ್ಕೆ ಬಾರದು.

ಯೆಹೆಜ್ಕೇಲ 17:23

ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.

ಯೆಹೆಜ್ಕೇಲ 28:3

ಇಗೋ, ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆ; ರಹಸ್ಯವಾದದ್ದು ಏನಿದ್ದರೂ ನಿನಗೆ ಮರೆಯಾಗಿರುವದಿಲ್ಲ.

ದಾನಿಯೇಲ 1:20

ಅರಸನು ಅವರ ಹತ್ತಿರ ವಿಚಾರಿಸಿದ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರ ರಿಗಿಂತಲೂ ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡರು.ದಾನಿಯೇಲನು ರಾಜ ನಾದ ಕೋರೆಷನ ಆಳಿಕೆಯ ಮೊದಲನೆಯ ವರುಷದ ತನಕ ಸನ್ನಿಧಿಸೇವಕನಾಗಿಯೇ ಇದ್ದನು.

ದಾನಿಯೇಲ 2:3

ಆಗ ಅರಸನು ಅವರಿಗೆ--ನಾನು ಒಂದು ಕನಸ್ಸು ಕಂಡಿದ್ದೇನೆ; ಆ ಕನಸಿನ ಅರ್ಥವನ್ನು ತಿಳಿಯುವದಕ್ಕಾಗಿ ನನ್ನ ಆತ್ಮವು ಕಳವಳಗೊಂಡಿದೆ ಅಂದನು.

ದಾನಿಯೇಲ 2:48

ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು.ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್‌ ಮೇಷಕ್‌ ಮತ್ತು ಅಬೇದ್‌ನೆಗೋ ಎಂಬವರಿಗೆ ಬಾಬೆಲ್‌ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.

ದಾನಿಯೇಲ 4:5

ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.

ದಾನಿಯೇಲ 4:8

ಕಡೆಯಲ್ಲಿ ನನ್ನ ದೇವರ ಹೆಸರಿನ ಹಾಗೆಯೂ ಬೇಲ್ತೆಶಚ್ಚರನೆಂಬ ಹೆಸರುಳ್ಳವನಾಗಿಯೂ ಪರಿಶುದ್ಧ ದೇವರ ಆತ್ಮವನ್ನು ಹೊಂದಿದವನಾಗಿಯೂ ಇರುವ ದಾನಿಯೇಲನು ನನ್ನ ಮುಂದೆ ಬಂದನು; ಅವನಿಗೆ ನಾನು ಕನಸನ್ನು ತಿಳಿಸಿ ಹೇಳಿದ್ದೇನಂದರೆ--

ದಾನಿಯೇಲ 4:18

ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೆಲ್ತೆಶಚ್ಚರ ನೆಂಬ ನೀನು ಅದರ ಅರ್ಥವನ್ನು ಹೇಳು. ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿ ಶುದ್ಧ ದೇವರುಗಳ ಆತ್ಮವು ಇರುವದರಿಂದ ನೀನು ಹೇಳಲು ಸಾಧ್ಯವಾಯಿತು.

ದಾನಿಯೇಲ 5:11

ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ; ದೇವ ರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಯೂ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ ಜ್ಯೋತಿಷ್ಯರಿಗೂ ಕಸ್ದೀಯರಿಗೂ ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.

Interlinear

Choose Theme