ಬೆಲ್ಶೆಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವದಕ್ಕೂ ಕಠಿಣವಾದ ಸಂಗತಿಗಳನ್ನು ತಿಳಿಸುವದಕ್ಕೂ ಮರ್ಮಗಳನ್ನು ಬಿಚ್ಚುವ ದಕ್ಕೂ ಉತ್ತಮ ಆತ್ಮವೂ ಜ್ಞಾನವೂ ವಿವೇಕವೂ ಸಿಕ್ಕಿ ದವು ಅಂದಳು. ಈಗ ಆ ದಾನಿಯೇಲನನ್ನು ಕರೆಯಿ ಸಿದರೆ ಅವನು ಈ ಬರಹದ ಅರ್ಥವನ್ನು ವಿವರಿಸುವನು ಅಂದಳು.
Cross references
ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು.
ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ ಒಗಟುಗಳಿಂದ ಅವನನ್ನು ಶೋಧಿಸಲು ಅವಳು ಮಹಾಗುಂಪಿನ ಸಂಗಡ ಸುಗಂಧಗಳನ್ನೂ ಬಹು ಬಂಗಾರವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಅವನ ಸಂಗಡ ಮಾತಾ ಡಿದಳು.
ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.
ನೀತಿ ವಂತನು ತನ್ನ ನೆರೆಯವನಿಗಿಂತ ಶ್ರೇಷ್ಠನಾಗಿದ್ದಾನೆ; ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆ ಯುತ್ತದೆ.
ತಿಳುವಳಿಕೆಯುಳ್ಳ ವನು ಮಿತವಾಗಿ ಮಾತನಾಡುತ್ತಾನೆ; ವಿವೇಕಿಯು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.
ಇವರಿಗೆ ಕಂಚುಕಿಯ ಯಜಮಾ ನನು ಹೆಸರುಗಳನ್ನಿಟ್ಟನು, ಹೇಗಂದರೆ ದಾನಿಯೇಲ ನನ್ನು ಬೇಲ್ತೆಶಚ್ಚರನೆಂದೂ ಹನನ್ಯನನ್ನು ಶದ್ರಕ್ನೆಂದೂ ವಿಾಶಾಯೇಲನನ್ನು ಮೇಶಕ್ನೆಂದೂ ಅಜರ್ಯನಿಗೆ ಅಬೆದ್ನೆಗೋ ಎಂದು ಕರೆದನು.
ಈ ನಾಲ್ಕು ಯೌವನಸ್ಥರ ವಿಷಯವು: ದೇವರು ಅವರಿಗೆ ಎಲ್ಲಾ ವಿದ್ಯೆಯಲ್ಲಿಯೂ ಜ್ಞಾನದಲ್ಲಿಯೂ ತಿಳುವಳಿಕೆಯನ್ನೂ ವಿವೇಕವನ್ನೂ ಕೊಟ್ಟನು; ದಾನಿಯೇಲನು ಸಕಲ ದರ್ಶನಗಳಲ್ಲಿಯೂ ಕನಸುಗಳಲ್ಲಿಯೂ ತಿಳುವಳಿಕೆ ಯುಳ್ಳವನಾಗಿದ್ದನು.
ಕಡೆಯಲ್ಲಿ ನನ್ನ ದೇವರ ಹೆಸರಿನ ಹಾಗೆಯೂ ಬೇಲ್ತೆಶಚ್ಚರನೆಂಬ ಹೆಸರುಳ್ಳವನಾಗಿಯೂ ಪರಿಶುದ್ಧ ದೇವರ ಆತ್ಮವನ್ನು ಹೊಂದಿದವನಾಗಿಯೂ ಇರುವ ದಾನಿಯೇಲನು ನನ್ನ ಮುಂದೆ ಬಂದನು; ಅವನಿಗೆ ನಾನು ಕನಸನ್ನು ತಿಳಿಸಿ ಹೇಳಿದ್ದೇನಂದರೆ--
ಆಗ ಬೆಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ-- ಬೆಲ್ತೆಶಚ್ಚರನೇ, ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಕಳವಳಪಡಿಸದಿರಲಿ ಅಂದನು. ಆಗ ಬೆಲ್ತೆಶ ಚ್ಚರನು ಪ್ರತ್ಯುತ್ತರವಾಗಿ--ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.
ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ ಬೆಳಕೂ ಬುದ್ಧಿಯೂ ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.
ನೀನು ಅರ್ಥಗಳನ್ನು ವಿವರಿಸುವದ ರಲ್ಲಿಯೂ ಮರ್ಮಗಳನ್ನು ಬಿಚ್ಚುವದರಲ್ಲಿಯೂ ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ; ಹೀಗಾದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ತಿಳಿಸುವದಕ್ಕೂ ನಿನ್ನಿಂದ ಆದರೆ ನೀನು ಧೂಮ್ರವಸ್ತ್ರ ಧರಿಸಲ್ಪಟ್ಟು ಕೊರಳಿಗೆ ಚಿನ್ನದ ಹಾರ ಹಾಕಿಸಿಕೊಂಡವನಾಗಿ ರಾಜ್ಯದ ಮೂರನೆಯ ಅಧಿಕಾರಿ ಯಾಗುವಿ ಎಂದು ಹೇಳಿದನು.
ಆಗ ಈ ದಾನಿ ಯೇಲನಲ್ಲಿ ಉತ್ತಮ ಆತ್ಮವು ಇರುವದರಿಂದ ಅವನು ಪ್ರಧಾನರಿಗಿಂತಲೂ ದೇಶಾಧಿಪತಿಗಿಂತಲೂ ಶ್ರೇಷ್ಠನಾ ಗಿದ್ದನು. ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಮನಸ್ಸುಳ್ಳವನಾಗಿದ್ದನು.
ಹೀಗಿರಲು ಪ್ರಧಾನಿಗಳೂ ದೇಶಾಧಿಪತಿಗಳೂ ರಾಜ್ಯ ಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ದೋಷವು ಇಲ್ಲದಿದ್ದದ್ದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.
ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.