ನೀನು ಅರ್ಥಗಳನ್ನು ವಿವರಿಸುವದ ರಲ್ಲಿಯೂ ಮರ್ಮಗಳನ್ನು ಬಿಚ್ಚುವದರಲ್ಲಿಯೂ ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ; ಹೀಗಾದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ತಿಳಿಸುವದಕ್ಕೂ ನಿನ್ನಿಂದ ಆದರೆ ನೀನು ಧೂಮ್ರವಸ್ತ್ರ ಧರಿಸಲ್ಪಟ್ಟು ಕೊರಳಿಗೆ ಚಿನ್ನದ ಹಾರ ಹಾಕಿಸಿಕೊಂಡವನಾಗಿ ರಾಜ್ಯದ ಮೂರನೆಯ ಅಧಿಕಾರಿ ಯಾಗುವಿ ಎಂದು ಹೇಳಿದನು.
Cross references
ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು.
ಆದರೆ ನೀವು ಕನ ಸನ್ನೂ ಅದರ ಅರ್ಥಗಳನ್ನೂ ತಿಳಿಸಿದರೆ, ದಾನಗಳನ್ನೂ ಬಹುಮಾನಗಳನ್ನೂ ಬಹಳ ಘನವನ್ನೂ ನನ್ನಿಂದ ಪಡೆಯುವಿರಿ; ಹೀಗಿರಲಾಗಿ ಕನಸನ್ನೂ ಅದರ ಅಭಿ ಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಿದನು.
ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು.
ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರ ವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಹಾರವನ್ನು ಹಾಕಿ, ಇವನು ರಾಜ್ಯದ ಮೂವರು ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿ ದನು.
ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮ ಕೊಡೋ ಣವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು--