ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.
Cross references
ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.
ಅವನ ಸಂಗಡ ಒಳ್ಳೇ ಮಾತುಗಳನ್ನು ಆಡಿ, ಅವನ ಸಿಂಹಾಸನವನ್ನು ಬಾಬೆಲಿನಲ್ಲಿ ತನ್ನ ಸಂಗಡ ಇರುವ ಅರಸುಗಳ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಿ ಅವನ ಸೆರೆ ವಸ್ತ್ರಗಳನ್ನು ಬದಲಾಯಿಸಿದನು.
ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
ನಿನ್ನಲ್ಲಿ ಸಂತೋಷಿಸಿ ಉತ್ಸಾಹಪಡುವೆನು; ಓ ಮಹೋ ನ್ನತನೇ, ನಿನ್ನ ಹೆಸರನ್ನು ಸ್ತುತಿಸಿ ಹಾಡುವೆನು.
ಮಹೋನ್ನತನಾದ ಕರ್ತನು ಭಯಂಕ ರನೂ ಭೂಮಿಯ ಮೇಲೆಲ್ಲಾ ಮಹಾಅರಸನೂ ಆಗಿದ್ದಾನೆ.
ಆದರೆ ಕರ್ತನೇ, ಎಂದೆಂದಿಗೂ ನೀನು ಉನ್ನತನಾಗಿದ್ದೀ;
ಆದಾಗ್ಯೂ ನಾನು ನಿನಗೂ ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು.
ಮಹೋನ್ನತನ ಸನ್ನಿಧಿಯಲ್ಲಿ ಮನುಷ್ಯನ ನ್ಯಾಯವನ್ನು ತಿರುಗಿಸು ವದನ್ನೂ
ಮಹೋನ್ನತನ ಬಾಯಿಂದ ಕೆಟ್ಟದ್ದೂ ಒಳ್ಳೆಯದೂ ಹೊರಡುವದಿಲ್ಲವೇ?
ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.
ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.
ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕ ಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿ ಬಂದಿದೆ.
ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.
ಆಗ ಬೆಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ-- ಬೆಲ್ತೆಶಚ್ಚರನೇ, ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಕಳವಳಪಡಿಸದಿರಲಿ ಅಂದನು. ಆಗ ಬೆಲ್ತೆಶ ಚ್ಚರನು ಪ್ರತ್ಯುತ್ತರವಾಗಿ--ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.
ಓ ಅರಸನೇ, ಆ ಮರವು ನೀನೇ ಆಗಿರುವಿ, ನೀನು ಬೆಳೆದು ಬಲವಾಗಿರುವಿ; ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ ನಿನ್ನ ಅಧಿಕಾರವು ಭೂಮಿಯ ಅಂತ್ಯದ ವರೆಗೂ ಮುಟ್ಟುವದು.
ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.
ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.
ಆದರೂ ಮಹೋನ್ನತನು ಕೈಯಿಂದ ಕಟ್ಟಿದ ಆಲಯಗಳಲ್ಲಿ ವಾಸಮಾಡುವಾತನಲ್ಲ. ಯಾಕಂದರೆ--
ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು.
ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.