Home Bibles ದಾನಿಯೇಲ 5:19 · ಕನ್ನಡ ಬೈಬಲ್
ದಾನಿಯೇಲ 5:19 · ಕನ್ನಡ ಬೈಬಲ್

ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು.

Cross references

2 ಅರಸುಗಳು 25:28

ಅವನ ಸಂಗಡ ಒಳ್ಳೇ ಮಾತುಗಳನ್ನು ಆಡಿ, ಅವನ ಸಿಂಹಾಸನವನ್ನು ಬಾಬೆಲಿನಲ್ಲಿ ತನ್ನ ಸಂಗಡ ಇರುವ ಅರಸುಗಳ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಿ ಅವನ ಸೆರೆ ವಸ್ತ್ರಗಳನ್ನು ಬದಲಾಯಿಸಿದನು.

ಸಾಮೇತಿಗಳು 16:14

ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ; ಜ್ಞಾನಿಯು ಅದನ್ನು ಶಮನಪಡಿಸುವನು.

ಸಭಾಪ್ರಸಂಗಿ 8:3

ಅವನ ದೃಷ್ಟಿಯಿಂದ ಹೊರಗೆ ಹೋಗುವದಕ್ಕೆ ಆತುರಪಡಬೇಡಿರಿ; ಕೆಟ್ಟ ಕಾರ್ಯದಲ್ಲಿ ನಿಲ್ಲಬೇಡಿರಿ; ಅವನು ತನಗೆ ಇಷ್ಟ ಬಂದದ್ದನ್ನೆಲ್ಲಾ ಮಾಡುತ್ತಾನೆ.

ಯೆರೆಮಿಯ 25:9

ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.

ಯೆರೆಮಿಯ 27:5

ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--

ದಾನಿಯೇಲ 2:12

ಇದರಿಂದ ಅರಸನು ಕೋಪವುಳ್ಳವನಾಗಿ ಮಹಾರೌದ್ರದಿಂದ ಬಾಬೆಲಿನಲ್ಲಿ ರುವ ಎಲ್ಲಾ ಜ್ಞಾನಿಗಳನ್ನು ನಾಶಮಾಡಬೇಕೆಂದು ಆಜ್ಞಾ ಪಿಸಿದನು.

ದಾನಿಯೇಲ 3:4

ಆಗ ಸಾರುವವನು ಗಟ್ಟಿ ಯಾಗಿ ಕೂಗಿ--ಓ ಪ್ರಜೆಗಳೇ, ಜನಾಂಗಗಳೇ ಮತ್ತು ನಾನಾ ಭಾಷೆಯವರೇ, ನಿಮಗೆ ಆಜ್ಞಾಪಿಸುವದೇ ನಂದರೆ--

ದಾನಿಯೇಲ 3:6

ಯಾವನು ಅಡ್ಡಬೀಳ ದೆಯೂ ನಮಸ್ಕರಿಸದೆಯೂ ಇರುವನೋ ಅವನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವನು ಅಂದನು.

ದಾನಿಯೇಲ 3:20

ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾ ದವರು ಶದ್ರಕ್‌, ಮೇಷಕ್‌, ಅಬೇದ್ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು.

ದಾನಿಯೇಲ 3:29

ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ.ಆಗ ಅರಸನು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬ ವರನ್ನು ಬಾಬೆಲ್‌ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.

ದಾನಿಯೇಲ 4:19

ಆಗ ಬೆಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ-- ಬೆಲ್ತೆಶಚ್ಚರನೇ, ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಕಳವಳಪಡಿಸದಿರಲಿ ಅಂದನು. ಆಗ ಬೆಲ್ತೆಶ ಚ್ಚರನು ಪ್ರತ್ಯುತ್ತರವಾಗಿ--ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.

ದಾನಿಯೇಲ 4:22

ಓ ಅರಸನೇ, ಆ ಮರವು ನೀನೇ ಆಗಿರುವಿ, ನೀನು ಬೆಳೆದು ಬಲವಾಗಿರುವಿ; ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ ನಿನ್ನ ಅಧಿಕಾರವು ಭೂಮಿಯ ಅಂತ್ಯದ ವರೆಗೂ ಮುಟ್ಟುವದು.

ದಾನಿಯೇಲ 11:12

ಆ ಸಮೂಹವನ್ನು ಅವನು ತೆಗೆದು ಹಾಕಿದ ಮೇಲೆ ಅವನ ಹೃದಯವು ಹೆಚ್ಚಳಪಡುವದು; ಹೌದು, ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ ಪ್ರಬಲವಾಗ ಲಾರನು.

ಹಬಕ್ಕೂಕ 2:5

ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ.

ಯೋಹಾನ 19:11

ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.

ರೋಮಾಪುರದವರಿಗೆ 13:1

ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು.

Interlinear

Choose Theme