ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು.
Cross references
ಅವನ ಸಂಗಡ ಒಳ್ಳೇ ಮಾತುಗಳನ್ನು ಆಡಿ, ಅವನ ಸಿಂಹಾಸನವನ್ನು ಬಾಬೆಲಿನಲ್ಲಿ ತನ್ನ ಸಂಗಡ ಇರುವ ಅರಸುಗಳ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಿ ಅವನ ಸೆರೆ ವಸ್ತ್ರಗಳನ್ನು ಬದಲಾಯಿಸಿದನು.
ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ; ಜ್ಞಾನಿಯು ಅದನ್ನು ಶಮನಪಡಿಸುವನು.
ಅವನ ದೃಷ್ಟಿಯಿಂದ ಹೊರಗೆ ಹೋಗುವದಕ್ಕೆ ಆತುರಪಡಬೇಡಿರಿ; ಕೆಟ್ಟ ಕಾರ್ಯದಲ್ಲಿ ನಿಲ್ಲಬೇಡಿರಿ; ಅವನು ತನಗೆ ಇಷ್ಟ ಬಂದದ್ದನ್ನೆಲ್ಲಾ ಮಾಡುತ್ತಾನೆ.
ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.
ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--
ಇದರಿಂದ ಅರಸನು ಕೋಪವುಳ್ಳವನಾಗಿ ಮಹಾರೌದ್ರದಿಂದ ಬಾಬೆಲಿನಲ್ಲಿ ರುವ ಎಲ್ಲಾ ಜ್ಞಾನಿಗಳನ್ನು ನಾಶಮಾಡಬೇಕೆಂದು ಆಜ್ಞಾ ಪಿಸಿದನು.
ಆಗ ಸಾರುವವನು ಗಟ್ಟಿ ಯಾಗಿ ಕೂಗಿ--ಓ ಪ್ರಜೆಗಳೇ, ಜನಾಂಗಗಳೇ ಮತ್ತು ನಾನಾ ಭಾಷೆಯವರೇ, ನಿಮಗೆ ಆಜ್ಞಾಪಿಸುವದೇ ನಂದರೆ--
ಯಾವನು ಅಡ್ಡಬೀಳ ದೆಯೂ ನಮಸ್ಕರಿಸದೆಯೂ ಇರುವನೋ ಅವನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವನು ಅಂದನು.
ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾ ದವರು ಶದ್ರಕ್, ಮೇಷಕ್, ಅಬೇದ್ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು.
ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ.ಆಗ ಅರಸನು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬ ವರನ್ನು ಬಾಬೆಲ್ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.
ಆಗ ಬೆಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ-- ಬೆಲ್ತೆಶಚ್ಚರನೇ, ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಕಳವಳಪಡಿಸದಿರಲಿ ಅಂದನು. ಆಗ ಬೆಲ್ತೆಶ ಚ್ಚರನು ಪ್ರತ್ಯುತ್ತರವಾಗಿ--ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.
ಓ ಅರಸನೇ, ಆ ಮರವು ನೀನೇ ಆಗಿರುವಿ, ನೀನು ಬೆಳೆದು ಬಲವಾಗಿರುವಿ; ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ ನಿನ್ನ ಅಧಿಕಾರವು ಭೂಮಿಯ ಅಂತ್ಯದ ವರೆಗೂ ಮುಟ್ಟುವದು.
ಆ ಸಮೂಹವನ್ನು ಅವನು ತೆಗೆದು ಹಾಕಿದ ಮೇಲೆ ಅವನ ಹೃದಯವು ಹೆಚ್ಚಳಪಡುವದು; ಹೌದು, ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ ಪ್ರಬಲವಾಗ ಲಾರನು.
ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ.
ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು.