ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು.
Cross references
ದಾವೀ ದನು--ಮೆಫೀಬೋಶೆತನೇ ಅಂದನು. ಅವನು--ಇಗೋ, ನಿನ್ನ ದಾಸನು ಅಂದನು. ಆಗ ದಾವೀದನು ಅವನಿಗೆ -- ಭಯಪಡಬೇಡ, ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು. ನಿನ್ನ ತಂದೆಯಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರಿಗಿ ಕೊಡುವೆನು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವಿ ಅಂದನು.
ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗನಾದ ಯೋರಾಮನ ಹನ್ನೆರಡನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಆಳಲಾರಂಭಿಸಿದನು.
ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು.
ಕಾವಲುಗಾರರ ಅಧಿಪತಿಯು ಅಗ್ನಿಪಾತ್ರೆಗಳನ್ನೂ ತಟ್ಟೆಗಳನ್ನೂ ಬಂಗಾರ ದವುಗಳಾದ ಬಂಗಾರವನ್ನೂ ಬೆಳ್ಳಿಯವುಗಳಾದ ಬೆಳ್ಳಿ ಯನ್ನೂ ತಕ್ಕೊಂಡನು.
ಇವಳ ತರು ವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಳನ್ನು ಹೆಂಡತಿಯಾಗಿ ತಕ್ಕೊಂಡನು. ಇವಳು ಅವನಿಗೆ ಅಬೀಯನ್ನೂ ಅತ್ತೈಯನ್ನೂ ಜೀಜನನ್ನೂ ಶೆಲೋ ವಿಾತನ್ನೂ ಹೆತ್ತಳು.
ಇದಲ್ಲದೆ ಅರಸನಾಗಿರುವ ಆಸನ ತಾಯಿಯಾದ ಮಾಕಳನ್ನು ಕುರಿತು ಏನಂದರೆ, ಅವಳು ಒಂದು ವಿಗ್ರಹವನ್ನು ಮಾಡಿಸಿ ತೋಪಿನಲ್ಲಿ ಇರಿಸಿದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿದನು. ಇದಲ್ಲದೆ ಆಸನು ಅವಳ ವಿಗ್ರಹವನ್ನು ಕಡಿದುಹಾಕಿ ಅದನ್ನು ತುಳಿದು ಕಿದ್ರೋನ್ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು.
ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು.
ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು ತನ್ನ ದೇವರುಗಳ ಮನೆಯಲ್ಲಿ ಇರಿಸಿದ್ದ ಕರ್ತನ ಆಲಯದ ಸಾಮಾನು ಗಳನ್ನು ಅರಸನಾದ ಕೋರೆಷನು ತರಿಸಿದನು.
ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತಕ್ಕೊಂಡು ಬಾಬೆಲಿನ ಮಂದಿರಕ್ಕೆ ತಂದ ದೇವರ ಆಲಯದ ಬೆಳ್ಳಿಬಂಗಾರದ ಸಾಮಾನುಗಳನ್ನು ಅರಸನಾದ ಕೋರೆ ಷನು ಬಾಬೆಲಿನ ಮಂದಿರದಿಂದ ತಕ್ಕೊಂಡು ತಾನು ನೇಮಿಸಿದ ಅಧಿಪತಿಯಾದ ಶೆಷ್ಬಚ್ಚರನಿಗೆ ಒಪ್ಪಿಸಿ ಅವ ನಿಗೆ--
ಆದಾಗ್ಯೂ ನಾನು ನಿನಗೂ ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು.
ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು, ದೇವಾಲಯದ ಕೆಲವು ಪಾತ್ರೆಗಳನ್ನು ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ ತನ್ನ ದೇವರ ಆಲಯಕ್ಕೂ ತಂದು ಪಾತ್ರೆಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.
ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು.
ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ; ದೇವ ರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಯೂ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ ಜ್ಯೋತಿಷ್ಯರಿಗೂ ಕಸ್ದೀಯರಿಗೂ ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.
ಆಗ ದಾನಿಯೇಲನು ಅರಸನ ಮುಂದೆ ತರಲ್ಪಟ್ಟನು. ಅರಸನು ದಾನಿಯೇಲನಿಗೆ--ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ?
ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.
ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.