ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
Cross references
ಫರೋಹನು ಕಳುಹಿಸಿ ನೋಡಿದಾಗ ಇಗೋ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸತ್ತಿರಲಿಲ್ಲ. ಆದರೆ ಫರೋಹನ ಹೃದಯವು ಕಠಿಣವಾಗಿದ್ದದರಿಂದ ಅವನು ಜನರನ್ನು ಕಳುಹಿಸಲಿಲ್ಲ.
ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧ ವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?
ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು.
ಐಗುಪ್ತ್ಯರೂ ಫರೋಹನೂ ತಮ್ಮ ಹೃದಯವನ್ನು ಕಠಿಣ ಮಾಡಿದ ಹಾಗೆ ನೀವು ನಿಮ್ಮ ಹೃದಯವನ್ನು ಕಠಿಣಪಡಿಸುವದೇನು? ಯಾಕಂದರೆ ಆತನು ಅವರ ಮಧ್ಯದಲ್ಲಿ ಆಶ್ಚರ್ಯವಾದ ಕ್ರಿಯೆಗಳನ್ನು ನಡಿಸಿದಾಗ ಅವರು ಇಸ್ರಾಯೇಲ್ಯರನ್ನು ಹೋಗುವ ಹಾಗೆ ಕಳುಹಿಸಲಿಲ್ಲವೋ?
ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು
ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.
ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ.
ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು.
ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಕರ್ತನಿಗೆ ಅಸಹ್ಯ. ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ.
ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ?
ಬಾಬೆಲಿನ ಕುಮಾರ್ತೆಯಾದ ಓ ಕನ್ಯಾ ಸ್ತ್ರೀಯೇ, ಕೆಳಕ್ಕೆ ಇಳಿದು ಬಂದು ದೂಳಿ ನಲ್ಲಿ ಕುಳಿತುಕೋ, ಓ ಕಸ್ದೀಯರ ಕುಮಾರಿಯೇ ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಯಾಕಂದರೆ ಇನ್ನು ಮೇಲೆ ನೀನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯಲ್ಪಡುವದಿಲ್ಲ.
ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.
ನನ್ನ ತಂದೆಗೆ--ನಿನಗೆ ಗಂಡು ಕೂಸು ಹುಟ್ಟಿದೆ ಎಂಬ ಸಮಾಚಾರವನ್ನು ಹೇಳಿ ಬಹಳ ಸಂತೋಷ ಉಂಟು ಮಾಡಿದವನು ಶಪಿಸಲ್ಪಡಲಿ!
ಸೊದೋಮ್ ಗೊಮೋರ ಅವುಗಳ ಸವಿಾಪ ದಲ್ಲಿದ್ದ ಪಟ್ಟಣಗಳೂ ಕೆಡವಲ್ಪಟ್ಟಾಗ ಹಾಗೆಯೇ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ, ಅದರಲ್ಲಿ ಯಾವ ಮನುಷ್ಯನ ಪುತ್ರನಾದರೂ ತಂಗುವದಿಲ್ಲವೆಂದು ಕರ್ತನು ಅನ್ನುತ್ತಾನೆ.
ಕರ್ತನು ಹೀಗೆ ಹೇಳುತ್ತಾನೆ--ಐಗುಪ್ತಕ್ಕೆ ಆಧಾರ ವಾದವರು ಬೀಳುವರು. ಅದರ ಶಕ್ತಿಯ ಮದವು ಇಳಿದು ಹೋಗುವದು. ಅಲ್ಲಿನ ಜನರು ಮಿಗ್ದೋಲಿ ನಿಂದ ಸೆವೇನೆಯ ಗೋಪುರ ಮೊದಲುಗೊಂಡು ಅವರಲ್ಲಿ ಕತ್ತಿಯಿಂದ ಹತರಾಗುವರು ಎಂದು ದೇವ ರಾದ ಕರ್ತನು ಹೇಳುತ್ತಾನೆ.
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಯಾಕಂದರೆ ನೀನು ನೀಳದಲ್ಲಿ ಎತ್ತರವಾಗಿ ಅವನು ತನ್ನ ತಲೆಯನ್ನು ಒತ್ತಿಕೊಂಡಿರುವ ಕೊಂಬೆಗಳ ಕಡೆಗೆ ಚಾಚಿದ ಕಾರಣದಿಂದ ಅವನ ಹೃದಯವು ತನ್ನ ಎತ್ತರದಲ್ಲಿ ಹೆಚ್ಚಿಸಲ್ಪಟ್ಟಿದೆ.
ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂದು ಅವರು ಆಜ್ಞೆ ಮಾಡಿದ್ದರಲ್ಲಿ ಅಂದರೆ ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವದು.
ಅರಸನಾದ ನೆಬೂಕದ್ನೆಚ್ಚರನಿಗೆ ಇದೆಲ್ಲವೂ ಸಂಭ ವಿಸಿತು.
ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ;
ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.