ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರ ವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಹಾರವನ್ನು ಹಾಕಿ, ಇವನು ರಾಜ್ಯದ ಮೂವರು ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿ ದನು.
Cross references
ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು.
ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.
ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು.
ನೀನು ಅರ್ಥಗಳನ್ನು ವಿವರಿಸುವದ ರಲ್ಲಿಯೂ ಮರ್ಮಗಳನ್ನು ಬಿಚ್ಚುವದರಲ್ಲಿಯೂ ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ; ಹೀಗಾದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ತಿಳಿಸುವದಕ್ಕೂ ನಿನ್ನಿಂದ ಆದರೆ ನೀನು ಧೂಮ್ರವಸ್ತ್ರ ಧರಿಸಲ್ಪಟ್ಟು ಕೊರಳಿಗೆ ಚಿನ್ನದ ಹಾರ ಹಾಕಿಸಿಕೊಂಡವನಾಗಿ ರಾಜ್ಯದ ಮೂರನೆಯ ಅಧಿಕಾರಿ ಯಾಗುವಿ ಎಂದು ಹೇಳಿದನು.