ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
Cross references
ದುಷ್ಟನು ತನ್ನ ದಿವಸಗಳಲ್ಲೆಲ್ಲಾ ವೇದನೆ ಪಡು ತ್ತಾನೆ; ವರುಷಗಳ ಲೆಕ್ಕವು ಬಲಾತ್ಕಾರಿಗೆ ಮರೆಯಾಗಿದೆ.
ದೀನರನ್ನು ಜಜ್ಜಿ ತೊರೆ ದುಬಿಟ್ಟನು; ತಾನು ಕಟ್ಟದ ಮನೆಯನ್ನು ಕೆಡವಿ ಬಿಟ್ಟನು.
ಅವರ ಕಣ್ಣಗಳು ಕಾಣದ ಹಾಗೆ ಕತ್ತಲಾಗಲಿ; ಅವರ ಸೊಂಟಗಳನ್ನು ಯಾವಾಗಲೂ ಕದಲಿಸು.
ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ.
ಅವರಲ್ಲಿ ಯಾರೂ ದಣಿದು ಮುಗ್ಗರಿಸರು; ಅಥವಾ ಅವರು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ, ಇಲ್ಲವೆ ಅವರ ನಡುಕಟ್ಟು ಬಿಚ್ಚಿಕೊಳ್ಳುವದಿಲ್ಲ. ಕೆರದ ಬಾರು ಹರಿಯುವದಿಲ್ಲ.
ಆದ ಕಾರಣ ಎಲ್ಲಾ ಕೈಗಳು ಜೋಲು ಬೀಳುವವು ಪ್ರತಿ ಯೊಬ್ಬನ ಹೃದಯವು ಕರಗುವದು.
ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ.
ಅದರ ಪಟ್ಟಣಗಳು ಹಾಳಾದವು; ಅವು ಒಣನೆಲವೂ ಅಡವಿಯೂ ಯಾರೂ ವಾಸಮಾಡದೆ, ಮನುಷ್ಯನ ಮಗನು ಹಾದುಹೋಗದೆ ಇರುವ ದೇಶವೂ ಆಗಿವೆ.
ಕೈಗಳೆಲ್ಲಾ ಜೋತಾಡುವವು; ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣವಾಗು ವವು.
ನೀನು ಯಾಕೆ ನಿಟ್ಟುಸಿರಿಡುತ್ತೀ ಎಂದು ಅವರು ನಿನಗೆ ಕೇಳಿದಾಗ ನೀನು ಹೇಳಬೇಕಾದದ್ದೇನಂದರೆ -- ಆ ಸುದ್ದಿಯ ನಿಮಿತ್ತವೇ ಅದು ಬರುವದು; ಯಾಕಂದರೆ ಆಗ ಹೃದಯಗಳೆಲ್ಲಾ ಕರಗುವವು; ಕೈಗಳೆಲ್ಲಾ ನಿತ್ರಾಣ ವಾಗುವವು, ಪ್ರತಿಯೊಂದು ಆತ್ಮವು ಕುಂದಿ ಹೋಗು ವದು, ಮತ್ತು ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣಗೊಳ್ಳುವವು; ಇಗೋ, ಅದು ಬರುತ್ತದೆ, ತರಲ್ಪಡುತ್ತದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರುಷದಲ್ಲಿ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು.
ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.
ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.
ಆಗ ಬೆಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ-- ಬೆಲ್ತೆಶಚ್ಚರನೇ, ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಕಳವಳಪಡಿಸದಿರಲಿ ಅಂದನು. ಆಗ ಬೆಲ್ತೆಶ ಚ್ಚರನು ಪ್ರತ್ಯುತ್ತರವಾಗಿ--ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.
ಆಗ ಅರಸ ನಾದ ಬೇಲ್ಯಚ್ಚರನು ಬಹಳವಾಗಿ ಕಳವಳಪಟ್ಟನು, ಅವನ ಮುಖವು ಕಳೆಗುಂದಿತು. ಅವನ ಪ್ರಭುಗಳು ವಿಸ್ಮಯಗೊಂಡರು.
ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ.
ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ.