Home Bibles ದಾನಿಯೇಲ 5:7 · ಕನ್ನಡ ಬೈಬಲ್
ದಾನಿಯೇಲ 5:7 · ಕನ್ನಡ ಬೈಬಲ್

ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು.

Cross references

ಆದಿಕಾಂಡ 41:8

ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.

ಆದಿಕಾಂಡ 41:42

ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು.

ಅಂಕೆಗಳ ಪುಸ್ತಕ 22:7

ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಕಣಿ ಕೇಳುವದಕ್ಕಾಗಿ ತಮ್ಮ ಕೈಯಲ್ಲಿ ಕಾಣಿಕೆ ಗಳನ್ನು ತಕ್ಕೊಂಡು ಹೋದರು; ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.

ಅಂಕೆಗಳ ಪುಸ್ತಕ 22:17

ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ನನಗೆ ಹೇಳುವದನ್ನೆಲ್ಲಾ ನಾನು ಮಾಡುವೆನು; ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು ಅಂದನು.

ಅಂಕೆಗಳ ಪುಸ್ತಕ 24:11

ಈಗ ನಿನ್ನ ಸ್ಥಳಕ್ಕೆ ಓಡಿಹೋಗು; ನಾನು ನಿನ್ನನ್ನು ಬಹು ಘನಪಡಿಸ ಬೇಕೆಂದು ಅಂದುಕೊಂಡೆನು; ಆದರೆ ಇಗೋ, ಕರ್ತನು ನಿನಗೆ ಘನಬಾರದಂತೆ ತಡೆದಿದ್ದಾನೆ ಅಂದನು.

1 ಸಮುವೇಲ 17:25

ಇಸ್ರಾಯೇಲ್‌ ಮನು ಷ್ಯರು--ಏರಿ ಬಂದ ಈ ಮನುಷ್ಯನನ್ನು ನೋಡಿ ದಿರೋ? ಇಸ್ರಾಯೇಲನ್ನು ಹೀಯಾಳಿಸಲು ಏರಿ ಬಂದಿದ್ದಾನಲ್ಲಾ. ಯಾವನು ಇವನನ್ನು ಕೊಂದುಬಿಡು ವನೋ ಅವನನ್ನು ಅರಸನು ಬಹಳ ಐಶ್ವರ್ಯ ವಂತನಾಗ ಮಾಡಿ ಅವನಿಗೆ ತನ್ನ ಮಗಳನ್ನು ಕೊಟ್ಟು ಅವನ ತಂದೆಯ ಮನೆಯನ್ನು ಇಸ್ರಾಯೇಲ್ಯರಲ್ಲಿ ಸರ್ವ ಮಾನ್ಯವನ್ನು ಕೊಡುವನು ಅಂದರು.

ಎಸ್ತೇರ್ 3:1

ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನು ಅಗಾಗ್ಯನಾದ ಹಮ್ಮೆದಾತನ ಮಗನಾದ ಹಾಮಾನನನ್ನು ದೊಡ್ಡವ ನಾಗಿ ಮಾಡಿ ಅವನನ್ನು ಎತ್ತಿ ತನ್ನ ಬಳಿಯಲ್ಲಿರುವ ಸಮಸ್ತ ಪ್ರಧಾನರಿಗಿಂತ ಅವನ ಆಸನವನ್ನು ಉನ್ನತ ಮಾಡಿದನು.

ಎಸ್ತೇರ್ 10:2

ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರ ಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿ ದ್ದಿಯೂ ಇವು ಮೇದ್ಯಪಾರಸಿಯ ಅರಸರುಗಳ ರಾಜ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ?ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.

ಸಾಮೇತಿಗಳು 1:9

ಅವು ನಿನ್ನ ತಲೆಗೆ ಕೃಪೆಯ ಆಭರಣವೂ ನಿನ್ನ ಕೊರಳಿನ ಸುತ್ತಲೂ ಸರಗಳಂತೆಯೂ ಇರುವವು.

ಪರಮಗೀತ 1:10

ನಿನ್ನ ಕೆನ್ನೆಗಳು ಆಭರಣಗಳ ಸಾಲಿನಿಂದಲೂ ಕೊರಳು ಕಂಠಮಾಲೆಗಳಿಂದಲೂ ರಮ್ಯವಾಗಿವೆ.

ಯೆಶಾಯ 44:25

ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ

ಯೆಶಾಯ 47:13

ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.

ಯೆಹೆಜ್ಕೇಲ 16:11

ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು.

ದಾನಿಯೇಲ 2:2

ಆಗ ಅರಸನಿಗೆ ತನ್ನ ಕನಸುಗಳನ್ನು ತಿಳಿಸುವ ಹಾಗೆ ಅರಸನು ಮಂತ್ರಗಾರರನ್ನೂ ಜೋತಿಷ್ಯರನ್ನೂ ಮಾಟ ಗಾರರನ್ನೂ ಕಸ್ದೀಯರನ್ನೂ ಕರೆಯಲು ಆಜ್ಞಾಪಿಸಿ ದನು; ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.

ದಾನಿಯೇಲ 2:6

ಆದರೆ ನೀವು ಕನ ಸನ್ನೂ ಅದರ ಅರ್ಥಗಳನ್ನೂ ತಿಳಿಸಿದರೆ, ದಾನಗಳನ್ನೂ ಬಹುಮಾನಗಳನ್ನೂ ಬಹಳ ಘನವನ್ನೂ ನನ್ನಿಂದ ಪಡೆಯುವಿರಿ; ಹೀಗಿರಲಾಗಿ ಕನಸನ್ನೂ ಅದರ ಅಭಿ ಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಿದನು.

ದಾನಿಯೇಲ 2:48

ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು.ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್‌ ಮೇಷಕ್‌ ಮತ್ತು ಅಬೇದ್‌ನೆಗೋ ಎಂಬವರಿಗೆ ಬಾಬೆಲ್‌ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.

ದಾನಿಯೇಲ 4:6

ಆದದರಿಂದ ನನ್ನ ಕನಸಿನ ಅರ್ಥವನ್ನು ನನಗೆ ತಿಳಿಸುವದಕ್ಕೋಸ್ಕರ ಬಾಬೆಲಿನ ಸಕಲ ಜ್ಞಾನಿಗಳನ್ನು ನನ್ನ ಮುಂದೆ ತರಬೇಕೆಂದು ಆಜ್ಞಾಪಿಸಿದೆನು.

ದಾನಿಯೇಲ 4:14

ಅವನು ಗಟ್ಟಿಯಾಗಿ ಕೂಗಿ--ಮರವನ್ನು ಕಡಿದು ಅದರ ಕೊಂಬೆಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ.

ದಾನಿಯೇಲ 5:16

ನೀನು ಅರ್ಥಗಳನ್ನು ವಿವರಿಸುವದ ರಲ್ಲಿಯೂ ಮರ್ಮಗಳನ್ನು ಬಿಚ್ಚುವದರಲ್ಲಿಯೂ ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ; ಹೀಗಾದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ತಿಳಿಸುವದಕ್ಕೂ ನಿನ್ನಿಂದ ಆದರೆ ನೀನು ಧೂಮ್ರವಸ್ತ್ರ ಧರಿಸಲ್ಪಟ್ಟು ಕೊರಳಿಗೆ ಚಿನ್ನದ ಹಾರ ಹಾಕಿಸಿಕೊಂಡವನಾಗಿ ರಾಜ್ಯದ ಮೂರನೆಯ ಅಧಿಕಾರಿ ಯಾಗುವಿ ಎಂದು ಹೇಳಿದನು.

ದಾನಿಯೇಲ 5:29

ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರ ವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಹಾರವನ್ನು ಹಾಕಿ, ಇವನು ರಾಜ್ಯದ ಮೂವರು ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿ ದನು.

ದಾನಿಯೇಲ 6:2

ಇವರ ಮೇಲೆ ಮೂವರು ದೇಶಾಧಿಪತಿಗಳನ್ನು ನೇಮಿಸುವದು ದಾರ್ಯಾವೆಷನಿಗೆ ಹಿತವೆಂದು ತೋಚಿತು. ಇದರಿಂದ ರಾಜನಿಗೆ ಯಾವ ತೊಂದರೆಯೂ ಇಲ್ಲದೆ ಲೆಕ್ಕಗಳು ಸರಿಯಾಗಿ ಒಪ್ಪಿಸಲ್ಪಡುತ್ತಿದ್ದವು. ಇವರಲ್ಲಿ ದಾನಿಯೇ ಲನು ಮೊದಲನೆಯವನಾಗಿದ್ದನು.

Interlinear

Choose Theme