ಅನಂತರ ಅವರು ಹತ್ತಿರ ಬಂದು ಅರಸನ ಮುಂದೆ ರಾಜಾಜ್ಞೆಯ ವಿಷಯವಾಗಿ ಮಾತನಾಡಿ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳ ವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡು ವರೋ ಅವರು ಸಿಂಹದ ಗವಿಯಲ್ಲಿ ಹಾಕಲ್ಪಡುವ ರೆಂಬ ನಿರ್ಣಯಕ್ಕೆ ನೀನು ರುಜುಹಾಕಲಿಲ್ಲವೇ ಅಂದರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ--ಮೇದ್ಯ ಯರ ಪಾರಸೀಯರ ಬದಲಾಗದಂತ ನ್ಯಾಯ ಪ್ರಮಾಣದ ಪ್ರಕಾರ ಅದು ಸತ್ಯವೇ ಅಂದನು.
Cross references
ಅರಸನಿಗೆ ಸಮ್ಮತಿಯಾದರೆ ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರ ಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯ ಮೇದ್ಯರ ಕಾನೂನುಗಳಲ್ಲಿ ಬರೆ ಯಲ್ಪಡಲಿ.
ಹೀಗಿರಲು ಆ ಸಮಯದಲ್ಲಿ ಕಸ್ದೀಯರು ಯೆಹೂದ್ಯರ ಮೇಲೆ ದೂರು ಹೊರಿಸಲು ಸನ್ನಿಧಿಗೆ ಬಂದು
ಓ ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ ಇದು ಬದಲಾಗದಂತೆ ಮೇದ್ಯಯರ ಮತ್ತು ಪಾರಸೀಯರ ನ್ಯಾಯಪ್ರಮಾಣದ ಪ್ರಕಾರ ಇದು ಬೇರೆಯಾಗದಂತೆ ನಿರ್ಣಯವನ್ನು ರೂಪಿಸಿ ಬರಹಕ್ಕೆ ರುಜುಹಾಕು ಅಂದರು.
ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು.
ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
ಪೌಲ ನನ್ನು ಕರೆಯಿಸಿದಾಗ ತೆರ್ತುಲ್ಲನು ಅವನ ಮೇಲೆ ತಪ್ಪು ಹೊರಿಸುವದಕ್ಕೆ ಪ್ರಾರಂಭಿಸಿ--ಮಹಾಗೌರವವುಳ್ಳ ಫೇಲಿಕ್ಸನೇ, ನಿನ್ನಿಂದ ನಾವು ಬಹು ನೆಮ್ಮದಿ ಯಾಗಿರುವದರಿಂದಲೂ ನಿನ್ನ ಪರಾಂಬರಿಕೆಯಿಂದ ಈ ಜನಾಂಗಕ್ಕೆ ಬಹು ಯೋಗ್ಯವಾದ ಕಾರ್ಯಗಳು ನಡೆಯುತ್ತಿರುವದರಿಂದಲೂ