ಆಗ ರಾಜನು ಆಜ್ಞಾಪಿಸಲು ಅವರು ದಾನಿಯೇಲ ನನ್ನು ತಂದು ಸಿಂಹದ ಗವಿಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ--ನೀನು ಯಾವಾಗಲೂ ಪ್ರಾರ್ಥಿ ಸುವ ನಿನ್ನ ದೇವರು ನಿನ್ನನ್ನು ಬಿಡಿಸುವನು ಎಂದು ಹೇಳಿದನು.
Cross references
ನಾನು ಅರಸನಾಗಿ ಅಭಿಷೇಕಿಸ ಲ್ಪಟ್ಟಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಕುಮಾರ ರಾದ ಈ ಮನುಷ್ಯರು ನನಗೆ ಕಠಿಣರಾಗಿದ್ದಾರೆ. ಕೆಟ್ಟತನ ಮಾಡುವವನಿಗೆ ಕರ್ತನು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವನು ಅಂದನು.
ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.
ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ.ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.
ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು.
ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
ಆದದರಿಂದ ಬಾಬೆಲಿನ ಅರಸನಿಗೆ ನೀವು ಸೇವೆಮಾಡಬೇಡಿರೆಂದು ನಿಮಗೆ ಹೇಳುವ ಪ್ರವಾದಿಗಳ ವಾಕ್ಯಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು.
ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು.
ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.
ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್ ಮೇಷಕ್ ಅಬೇದ್ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.
ರಾಜ್ಯದ ಎಲ್ಲಾ ದೇಶಾಧಿಪತಿಗಳೂ ರಾಜ್ಯಪಾಲರೂ ನಾಯ ಕರೂ ಪ್ರಧಾನರೂ ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನಂದರೆ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾ ಪನೆ ಮಾಡಿದ್ದಾದರೆ ಅಂತವರು ಸಿಂಹದ ಗವಿಯಲ್ಲಿ ಹಾಕಲ್ಪಡುವರೆಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆ ಯನ್ನು ಕೊಡತಕ್ಕದ್ದು.
ಗವಿಯ ಹತ್ತಿರ ಬಂದಾಗ ದುಃಖದ ಧ್ವನಿಯಲ್ಲಿ ದಾನಿಯೇಲನ ಕಡೆಗೆ ಕೂಗಿದನು; ಅರಸನು ಮಾತನಾಡಿ ದಾನಿಯೇಲನಿಗೆ--ಜೀವವುಳ್ಳ ದೇವರ ಸೇವಕನಾದ ಓ ದಾನಿಯೇಲನೇ, ನೀನು ಯಾವಾ ಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಲು ಸಮರ್ಥನಾಗಿದ್ದಾನೆಯೇ? ಎಂದು ಕೇಳಿದನು.
ಅವಳು ತನ್ನ ತಾಯಿಯಿಂದ ಮೊದಲೇ ಕಲಿಸಲ್ಪಟ್ಟವಳಾಗಿ-- ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಪರಾ ತಿನಲ್ಲಿ ಇಲ್ಲಿಯೇ ನನಗೆ ಕೊಡು ಎಂದು ಹೇಳಿದಳು.
ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.
ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು-- ಬಾಪ್ತಿಸ್ಮಮಾಡಿಸುವ ಯೊಹಾನನ ತಲೆಯನ್ನು ನೀನು ಕೂಡಲೆ ಪರಾತಿನಲ್ಲಿ ನನಗೆ ಕೊಡಬೇಕೆಂದು ನಾನು ಕೇಳಿಕೊಳ್ಳುತ್ತೇನೆ ಅಂದಳು.
ಆಗ ಪಿಲಾತನು ಅವರಿಗೆ--ಯಾಕೆ? ಆತನು ಕೆಟ್ಟದ್ದೇನು ಮಾಡಿದನು ಎಂದು ಹೇಳಲು ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು.
ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.
ಆದರೆ ಯೆಹೂದ್ಯರನ್ನು ಸಂತೋಷ ಪಡಿಸುವದಕ್ಕಾಗಿ ಫೆಸ್ತನು ಪೌಲನಿಗೆ--ನೀನು ಯೆರೂಸಲೇಮಿಗೆ ಬಂದು ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟ ವಿದೆಯೋ ಎಂದು ಕೇಳಿದನು.
ನಾನು ಅನ್ಯಾಯಮಾಡಿದವ ನಾಗಿದ್ದರೆ ಇಲ್ಲವೆ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದರೆ ಸಾಯುವದಕ್ಕೆ ನಾನು ಬೇಡವೆನ್ನುವದಿಲ್ಲ; ನನ್ನ ಮೇಲೆ ಅವರು ತಪ್ಪು ಹೊರಿಸುವವುಗಳಲ್ಲಿ ಯಾವದೂ ಇಲ್ಲದೆ ಹೋದರೆ ನನ್ನನ್ನು ಅವರಿಗೆ ಯಾವ ಮನುಷ್ಯನೂ ಒಪ್ಪಿಸಲಾರನು; ನಾನು ಕೈಸರ
ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು.